ನೇತ್ರಾವತಿಯಲ್ಲಿ ಪ್ರವಾಹವೇರುವ ಅಪಾಯ ಇರುವ ಕಾರಣ ಗುರುವಾರ ರಾತ್ರಿ ಬಂಟ್ವಾಳದ ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯಲ್ಲಿರುವ ಗಂಜಿಕೇಂದ್ರಕ್ಕೆ ನೇತ್ರಾವತಿ ತೀರದಲ್ಲಿರುವ ಸುಣ್ಣದಗೂಡು ಪ್ರದೇಶದ ಸುಮಾರು 80ಕ್ಕೂ ಅಧಿಕ ಜನರನ್ನು ರಾತ್ರಿ ಸುಮಾರು 9.45ರ ವೇಳೆ ಸ್ಥಳಾಂತರಿಸಲಾಗಿದೆ. ಇವರಲ್ಲಿ ಕಾರ್ಮಿಕರು, ಅವರ ಕುಟುಂಬದವರು ಇದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ರಾಮ ಕಾಟಿಪಳ್ಳ, ಪುರಸಭೆ ಸಿಬ್ಬಂದಿ ಇಕ್ಬಾಲ್, ಪಾಣೆಮಂಗಳೂರು ಗ್ರಾಮ ಲೆಕ್ಕಾಧಿಕಾರಿ ವಿಜೇತ
ನರಿಕೊಂಬು ಗ್ರಾಮದ ಲೆಕ್ಕಾಧಿಕಾರಿ ನಾಗರಾಜ್ , ಬಿ ಮೂಡ ಗ್ರಾಮ ಲೆಕ್ಕಾಧಿಕಾರಿ ಶಿವನಂದ ನಾಟೆಕಾರ್, ಕರಿಯಂಗಳ ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ , ರಾಯಿ ಗ್ರಾಮ ಲೆಕ್ಕಾಧಿಕಾರಿ ಪರಿಕ್ಷೀತ್, ಸಿಬ್ಬಂದಿ ಶಿವ ಪ್ರಸಾದ್ ಈ ಸಂದರ್ಭ ಉಪಸ್ಥಿತರಿದ್ದರು.
www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಸುದ್ದಿ, ಲೇಖನಗಳಿಗೆ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127
Be the first to comment on "ಅಪಾಯ ಮುನ್ನೆಚ್ಚರಿಕೆ: ಪಾಣೆಮಂಗಳೂರು ಗಂಜಿಕೇಂದ್ರಕ್ಕೆ ಸ್ಥಳಾಂತರ"