ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಮಂಗಳೂರು ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಜಾಹೀರಾತು
ಗುರುವಾರ ಇರಾ ಮಲಯಾಳಿ ಬಿಲ್ಲವ ಸಭಾಭವನದಲ್ಲಿ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗನುಗುಣವಾಗಿ ಹಂತ, ಹಂತದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿಪಂ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಗ್ರಾಪಂ ಸದಸ್ಯ ಬಿ.ಉಮ್ಮರ್, ಗೋಪಾಲ ಅಶ್ವಥದಡಿ, ಮೊಯಿದ್ದೀನ್ ಕುಂಞ, ರಮೇಶ್ ಪೂಜಾರಿ, ತುಳಸಿ, ಪಾರ್ವತಿ, ಸವಿತಾ, ಪಿಡಿಒ ನಳಿನಿ ಎ.ಕೆ ಮೊದಲಾದವರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗ್ರಾಮೀಣ ಸಮಸ್ಯೆ ನೀಗಿಸಲು ಪ್ರಾಮಾಣಿಕ ಪ್ರಯತ್ನ: ಯು.ಟಿ.ಖಾದರ್"