ಸತತ ಐದನೇ ದಿನವೂ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿದೆ. ಬುಧವಾರ ಹಗಲು ಕೆಲ ಹೊತ್ತು ಬಿಡುವಿದ್ದರೂ ರಾತ್ರಿ ವೇಳೆ ಧಾರಾಕಾರವಾಗಿ ಮಳೆಯಾಗಿದೆ. ಗುರುವಾರ ಬೆಳಗ್ಗೆಯೂ ಗಾಳಿ, ಮಳೆ ಮುಂದುವರಿದ ಕಾರಣ ಬಂಟ್ವಾಳ ಪರಿಸರದಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಿದೆ. ಬೆಳಗ್ಗೆ 9.45 ರ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 8.15 ಮೀಟರ್ ಇತ್ತು. ಅಪಾಯದ ಮಟ್ಟ 8.5 ಆಗಿದ್ದು, ಈಗಾಗಲೇ ಬಂಟ್ವಾಳ ಸುತ್ತಮುತ್ತಲಿನ ಪರಿಸರದಲ್ಲಿ ಕೃತಕ ನೆರೆ ಕಂಡುಬಂದಿದೆ.
www.bantwalnews.com ಸಂಪಾದಕ: ಹರೀಶ ಮಾಂಬಾಡಿ