ಬಂಟ್ವಾಳ

ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ, ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಶುಕ್ರವಾರವೂ ಮುಂದುವರಿದಿದ್ದು, ಮಧ್ಯಾಹ್ನದವರೆಗಿನ ವರದಿಯಂತೆ ಜಿಲ್ಲೆಯ ಜೀವನದಿ ನೇತ್ರಾವತಿ ಹಲವೆಡೆ ಉಕ್ಕಿ ಹರಿದಿದೆ. ಬಂಟ್ವಾಳ ಸಹಿತ ಧರ್ಮಸ್ಥಳದಿಂದ ಮಂಗಳೂರಿನವರೆಗೆ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿದ್ದು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕಿನ ಹಲವೆಡೆ ಹಾನಿಗಳುಂಟಾಗಿದ್ದು, ಕೆಲವೆಡೆ ಮನೆಯಿಂದ ಹೊರಬರಲೂ ಆಗದಂಥ ಸ್ಥಿತಿ ನಿರ್ಮಾಣವಾಗಿದೆ. ಬಂಟ್ವಾಳದಲ್ಲಿ ಈಗಾಗಲೇ ಅಪಾಯದ ಮಟ್ಟ ಮೀರಿ ನೇತ್ರಾವತಿ ಹರಿಯುತ್ತಿದ್ದು, ಸಂಜೆ ವೇಳೆ  ಇದೇ ಪರಿಸ್ಥಿತಿ ಮುಂದುವರಿದರೆ, 10 ಮೀಟರ್ ತಲುಪುವ ಸಾಧ್ಯತೆಯೂ ಇದೆ.

ಜಾಹೀರಾತು

ಘಟ್ಟದ ರಸ್ತೆಗಳೆಲ್ಲವೂ ಅಪಾಯದಲ್ಲಿದ್ದು, ಕೆಲವೆಡೆ ಸಣ್ಣ ಸೇತುವೆಗಳು ಮುಳುಗಿವೆ. ಪ್ರತಿ ತಾಲೂಕುಗಳಲ್ಲಿ ಅಧಿಕಾರಿಗಳು ಪರಿಹಾರ ಕಾರ್ಯಗಳಲ್ಲಿ ನಿರತರಾಗಿದ್ದು, ಜನಪ್ರತಿನಿಧಿಗಳು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ