ಬಂಟ್ವಾಳ ಜಲದಿಗ್ಬಂಧನ – ಸಮಸ್ಯೆ ಇದ್ದರೆ ಕರೆ ಮಾಡಿ 08255-232120

ಶುಕ್ರವಾರ ರಾತ್ರಿಯಿಂದೀಚೆಗೆ ಬಂಟ್ವಾಳ ಪೇಟೆಯಿಡೀ ಜಲಾವೃತಗೊಂಡಿದೆ. ತಾಲೂಕಿನ ಹಲವು ಭಾಗಗಳು ಸಂಪರ್ಕ ಕಡಿತಗೊಂಡಿವೆ. ಹಲವೆಡೆ ವಿದ್ಯುತ್ತಿಲ್ಲ. ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ತಹಶೀಲ್ದಾರ್ ರಶ್ಮಿ ಎಸ್.ಆರ್, ಸಹಾಯಕ ಕಮಿಷನರ್ ರವಿಚಂದ್ರ ನಾಯಕ್, ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಎನ್.ಡಿ.ಆರ್.ಎಫ್, ಕೋಸ್ಟ್ ಗಾರ್ಡ್, ಹೋಂ ಗಾರ್ಡ್ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅಪಾಯದ ಸ್ಥಿತಿಯಲ್ಲಿರುವವರನ್ನು ರಕ್ಷಿಸಿದ್ದಾರೆ. ಇದುವರೆಗೆ 100ಕ್ಕೂ ಅಧಿಕ ಮನೆ, ಅಂಗಡಿ, ಮುಂಗಟ್ಟುಗಳು ಜಲಬಾಧಿತವಾಗಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಾತ್ರಿಯಿಡೀ ಪರಿಸರವಿಡೀ ಸಂಚರಿಸಿದ್ದಾರೆ. ಪಾಣೆಮಂಗಳೂರು ಶಾರದಾ ಪ್ರೌಢಶಾಲೆ, ಬಂಟ್ವಾಳ ಐಬಿಯಲ್ಲಿ ಗಂಜಿಕೇಂದ್ರ ತೆರೆಯಲಾಗಿದ್ದು, ಅಲ್ಲಿ ಸಂತ್ರಸ್ತರಿದ್ದಾರೆ. ಉಳಿದ ಬಾಧಿತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಸುರಕ್ಷಿತ ಜಾಗಕ್ಕೆ ಶಿಫ್ಟ್ ಮಾಡಲಾಗಿದೆ. ಫರಂಗಿಪೇಟೆ, ಬ್ರಹ್ಮರಕೂಟ್ಲು, ತಲಪಾಡಿ, ಅಜಿಲಮೊಗರು, ಬಂಟ್ವಾಳದ ಬಹುತೇಕ ಎಲ್ಲ ತೀರಪ್ರದೇಶಗಳು ಜಲಬಾಧಿತವಾಗಿವೆ. ಯಾರಾದರೂ ಸಿಕ್ಕಿಹಾಕಿಕೊಂಡಿದ್ದು, ಸಹಾಯ ಬಯಸಿದರೆ, 08255-232120 (ಕಂಟ್ರೋಲ್ ರೂಂ)ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಬೇಕು ಎಂಬುದು ಬಂಟ್ವಾಳನ್ಯೂಸ್ ಕಾಳಜಿಯೂ ಹೌದು. 

ಜಾಹೀರಾತು

www.bantwalnews.comಸಂಪಾದಕ: ಹರೀಶ ಮಾಂಬಾಡಿ ಸಂಪರ್ಕ ಸಂಖ್ಯೆ: 9448548127

MLA OFFICE HELPLINE:

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಜಲದಿಗ್ಬಂಧನ – ಸಮಸ್ಯೆ ಇದ್ದರೆ ಕರೆ ಮಾಡಿ 08255-232120"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*