ಧಾರಾಕಾರ ಮಳೆಯಿಂದಾಗಿ ಪಾಣೆಮಂಗಳೂರು ಹಳೇ ಸೇತುವೆಯಿಂದ ಪೇಟೆಗೆ ತೆರಳುವ ರಸ್ತೆ ಅಪಾಯದ ಸ್ಥಿತಿಯಲ್ಲಿದೆ. ಅಲ್ಲಿರುವ ಸಾಲು ಮರಗಳ ಪೈಕಿ ಮರವೊಂದು ವಾಲಿ ಬೀಳುವ ಸ್ಥಿತಿಯಲ್ಲಿದ್ದು, ರಸ್ತೆಯಲ್ಲಿ ಬಿರುಕು ಕಾಣಿಸಿತು. ರಸ್ತೆಯಲ್ಲಿ ಸಂಚರಿಸುವ ಸಂದರ್ಭ ಅಪಾಯ ಎದುರಿಸಬೇಕಾಗುತ್ತದೆ. ಶುಕ್ರವಾರ ಸಂಜೆ ಸ್ಥಳ ಪರಿಶಿಲನೆ ನಡೆಸಿರುವ ತಹಶೀಲ್ದಾರ್ ರಶ್ಮಿ ಮತ್ತು ವಲಯಾರಣ್ಯಾಧಿಕಾರಿ ಬಿ.ಸುರೇಶ್ ಈ ಕುರಿತು ಕ್ರಮ ಕೈಗೊಳ್ಳುವ ಕುರಿತು ಮಾತುಕತೆ ನಡೆಸಿದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮತ್ತಿತರರು ಜೊತೆಗಿದ್ದರು.
ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ರಸ್ತೆ ಅಪಾಯದಲ್ಲಿ, ತಹಶೀಲ್ದಾರ್ ಪರಿಶೀಲನೆ"