ಬಂಟ್ವಾಳ

ಜಿಲ್ಲಾ ನ್ಯಾಯಾಧೀಶರಿಂದ ಬಂಟ್ವಾಳ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೋರ್ ಸತ್ಯನಾರಾಯಣಾಚಾರ್ಯ ಬಂಟ್ವಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭಾನುವಾರ ಮಧ್ಯಾಹ್ನ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭ ಸಿಜೆಎಂ ಗಂಗಾಧರ ಎ.ಆರ್, ಬಂಟ್ವಾಳ ಸೀನಿಯರ್ ಡಿವಿಜನ್ ಸಿವಿಲ್ ನ್ಯಾಯಾಧೀಶರಾದ ಇಮ್ತಿಯಾಜ್ ಅಹ್ಮದ್, ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಧೀಶೆ ರಮ್ಯಾ, ಸಹಾಯಕ ಕಮೀಷನರ್ ರವಿಚಂದ್ರ ನಾಯಕ್, ತಹಶೀಲ್ದಾರ್ ರಶ್ಮಿ ಎಸ್. ಆರ್, ಪಾಣೆಮಂಗಳೂರು ಕಂದಾಯ ನಿರೀಕ್ಷ ರಾಮ ಕಾಟಿಪಳ್ಳ, ವಿಟ್ಲ ಕಂದಯ ನಿರೀಕ್ಷಕ ದಿವಾಕರ ಮುಗುಳ್ಯ, ಸಿಬ್ಬಂದಿ ಸೀತಾರಾಮ ಕಮ್ಮಾಜೆ, ಗ್ರಾಮಲೆಕ್ಕಿಗ ಕರಿಬಸಪ್ಪ ನಾಯ್ಕ್, ಶಿವಪ್ರಸಾದ್, ಮೈಕಲ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. ಭಂಡಾರಿಬೆಟ್ಟು ಮುಳುಗಡೆ ಪ್ರದೇಶ, ಬಂಟ್ವಾಳ ಪೇಟೆ ಬಡ್ಡಕಟ್ಟೆ, ಗೂಡಿನಬಳಿ ಗೇಜ್, ಆಲಡ್ಕ ಪ್ರದೇಶಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಬಡ್ಡಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು ಸೂಕ್ತ ಪರಿಹಾರ ನೀಡುವಂತೆ ಅವರಲ್ಲಿ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ