ಪ್ರಮುಖ ಸುದ್ದಿಗಳು

ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದಿಂದ ನೆರೆ ಸಂತ್ರಸ್ತರಿಗೆ ನೆರವು

ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ರೋನ್ಸ್ ಬಂಟ್ವಾಳ್ ಮುಂದಾಳತ್ವದಲ್ಲಿ ಇತ್ತೀಚೆಗೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಬೆಳ್ತಂಗಡಿ ತಾಲೂಕಿನ ಜನರಿಗೆ ನೆರವು ನೀಡುವ ಕಾರ್ಯ ನಡೆಯಿತು.

ಜಾಹೀರಾತು

ಪಾತ್ರೆ, ದಿನಸಿ, ಚಹಾ ಹುಡಿ, ಸಕ್ಕರೆ, ಅಕ್ಕಿ, ಗೋಧಿ, ಔಷಧಿ, ಬ್ರಾಂಡ್ ನ್ಯೂ ಬಟ್ಟೆ,  ಚಾಪೆ, ಬ್ಲ್ಯಾಂಕೆಟ್, ಬೆಡ್ ಶೀಟುಗಳನ್ನು ಹೊತ್ತು ಕಾಲ್ನಡಿಗೆಯಲ್ಲಿ ಸಾಗಿ, ಮನೆಮನೆ ಭೇಟಿಗೈದ ತಂಡ, ಅವುಗಳನ್ನು ವಿತರಿಸಿ ಮಾನವೀಯತೆ ಮೆರೆದರು.

ಕನ್ನಡಿಗರ ಪತ್ರಕರ್ತರ ಸಂಘ, ಮಹರಾಷ್ಟ್ರದ ಅಧ್ಯಕ್ಷರಾದ ರೋನ್ಸ್ ಬಂಟ್ವಾಳ್ ಮಾರ್ಗದರ್ಶನದಲ್ಲಿ, ಪತ್ರಕರ್ತರಾದ ಆರೀಫ್ ಕಲ್ಕಟ್ಟ ನೇತೃತ್ವದಲ್ಲಿ ಶಿಕ್ಷಕ ವಿಠಲ ಅಬುರ, ಮೋಹನ್ ಕುತ್ತಾರು, ವಸಂತ ಕೋಣಾಜೆ  ಅಶ್ವಿನ್ ಕುತ್ತಾರು, ಕೀರ್ತನ್ ದೇವಾಡಿಗ ಮರೋಲಿ ಸೇರಿದಂತೆ ಸ್ಥಳೀಯ ಹಲವಾರು ಸಮಾಜ ಸೇವಕರು, ಗ್ರಾಮ ಪಂಚಾಯತ್ ಸದಸ್ಯರು ಸಾಥ್ ನೀಡಿದರು.

ಉಪ್ಪಿನಂಗಡಿ, ಬೆಳ್ತಂಗಡಿ, ಚಾರ್ಮಾಡಿಗಳಿಗೆ ಭೇಟಿ ನೀಡಿದ ತಂಡ, ಅಲ್ಲಿನ ತೊಂದರೆಗೊಳಗಾದ ಪ್ರದೆಶಗಳಿಗೆ  ಭೇಟಿ ನೀಡಿ ಮೂರು ದಿನ ಅಲ್ಲಿನ ಮನೆಮನೆಗಳಿಗೆ ತೆರಳಿ ನೆರವು ನೀಡಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.