ಕಲ್ಲಡ್ಕ

ಶ್ರೀಕೃಷ್ಣನ ಬಾಲಲೀಲೆ ನೆನಪಿಸಿದ ಮೊಸರು ಕುಡಿಕೆ ಉತ್ಸವ, ಕಲ್ಲಡ್ಕದಲ್ಲಿ ಶೋಭಾಯಾತ್ರೆ

laxman, Pooja studio, Melkar

ಕಲ್ಲಡ್ಕ ಶ್ರೀರಾಮ ಮಂದಿರದ 87ನೇ ವರ್ಷದ ಮೊಸರು ಕುಡಿಕೆ ಉತ್ಸವ ನಿಮಿತ್ತ ಶುಕ್ರವಾರ ಅಷ್ಟಮಿ ಹಿನ್ನೆಲೆಯಲ್ಲಿ ರಾತ್ರಿ ಭಜನೆ ನಡೆದರೆ, ಶನಿವಾರ ಪಲ್ಲಕ್ಕಿಯಲ್ಲಿ ಶ್ರೀಕೃಷ್ಣದೇವರ ಶೋಭಾಯಾತ್ರೆ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳಿಂದ ಶ್ರೀಕೃಷ್ಣಲೋಕ, ಕೃಷ್ಣನ ಬಾಲಲೀಲೆಗಳ ಪ್ರದರ್ಶನ ಜನಮನಸೂರೆಗೊಂಡಿತು.

ಜಾಹೀರಾತು

ಶೋಭಾಯಾತ್ರೆಯಲ್ಲಿ ನೇತಾಜಿ ಯುವಕ ಮಂಡಲ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ, ಮಣಿಕಂಠ ಯುವಕ ಮಂಡಲ, ತ್ರಿಶೂಲ್ ಫ್ರೆಂಡ್ಸ್ ರಾಯಪ್ಪಕೋಡಿ, ಶ್ರೀರಾಮ ವಿದ್ಯಾಕೇಂದ್ರದ ಕೃಷ್ಣಲೋಕ,ಶಿಲ್ಪಾ ಗೊಂಬೆ ಬಳಗ, ಓಂಶಕ್ತಿ ಫ್ರೆಂಡ್ಸ್ ನ ಸ್ತಬ್ಧಚಿತ್ರಗಳು ಗಮನ ಸೆಳೆದವು. ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿದ್ದರೆ, ಮೆರವಣಿಗೆಯಲ್ಲಿ ಶ್ರೀರಾಮಾಂಜನೇಯ ಸೇವಾ ಟ್ಟಸ್ಟನ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಯತೀನ್ ಕುಮಾರ್, ವಜ್ರನಾಥ ಕಲ್ಲಡ್ಕ, ಮಂದಿರದ ಸಮಿತಿ ಸದಸ್ಯರಾದ ಆರ್. ಚೆನ್ನಪ್ಪ ಕೋಟ್ಯಾನ್. ಕ. ಕೃಷ್ಣಪ್ಪ, ನಾಗೇಶ್ ,ಪುಷ್ಪರಾಜ್ ಶೆಟ್ಟಿಗಾರ್, ಹರೀಶ್ ಆಚಾರ್ಯ,  ಸುಜಿತ್ ಕೊಟ್ಟಾರಿ, ಉತ್ತಮ್ ಕುಮಾರ್ ಮತ್ತಿತರರು ಪಾಲ್ಗೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ