ಬಂಟ್ವಾಳ

ಬಂಟ್ವಾಳ ಕ್ಷೇತ್ರ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂ: ರಾಜೇಶ್ ನಾಯ್ಕ್

ಬಂಟ್ವಾಳ ಕ್ಷೇತ್ರದ ನಾನಾ ಅಬಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂಗಳನ್ನು ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ಜಾಹೀರಾತು

ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶಾಸಕರು,  ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ  25 ಕೋಟಿ  ರೂ. ಅನುದಾನ ಒದಗಿಸುವಂತೆ ಮನವಿ ಮಾಡಿದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು ಅನುದಾನ ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ . ಇದೇ ವೇಳೆ ಶ್ರೀ ಕ್ಷೇತ್ರ ಒಡಿಯೂರು ಸಂಸ್ಥಾನಮ್ ಮತ್ತು ಶ್ರೀ ಒಡಿಯೂರು ವಿ.ಸೌ.ಸ. ನಿಂದ  ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅನಾಹುತದ ಹಿನ್ನಲೆಯಲ್ಲಿ  ಮುಖ್ಯಮಂತ್ರಿಯವರ ನೆರೆ ಪರಿಹಾರ ನಿಧಿಗೆ ನೀಡಲಾದ 10 ಲಕ್ಷ ರೂ.ವಿನ ನೆರವಿನ ಚೆಕ್ ನ್ನು ಶಾಸಕ ಯು.ರಾಜೇಶ್ ನಾಯ್ಕ್ ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.

www.bantwalnews.com Editor: Harish Mambady

For Advertisements Pls contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.