ಶಂಭೂರು ಹೈಸ್ಕೂಲಿನಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ, ಇಂದ್ರಪ್ರಸ್ಥ ಪ್ರಥಮ

ವಿಜ್ಞಾನ ನಾಟಕಗಳು  ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಶಂಭೂರು ಶಾಲೆಯು ನಾಟಕಗಳ ಮೂಲಕ ರಾಷ್ಟ್ರಮಟ್ಟದ ಗಮನ ಸೆಳೆದಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರಿನ ಪ್ರಾಂಶುಪಾಲರಾದ ವಾಲ್ಟರ್ ಡಿ’ ಮೆಲ್ಲೋ ಹೇಳಿದರು.

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರಿನಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಜ್ಞಾನ ನಾಟಕ ಸ್ಪರ್ಧೆಯನ್ನು ಉಪ್ಪಿನ ದ್ರಾವಣದ ಮೂಲಕ ವಿದ್ಯುತ್ ಹಾಯಿಸಿ ದೀಪ ಉರಿಸಿ ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇಲಾಖೆಯವರು ಶಾಲೆ ಮೇಲಿಟ್ಟ ನಂಬಿಕೆ ವಿಶ್ವಾಸಕ್ಕೆ ವಂದಿಸಿದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ವಿಜ್ಞಾನ ನಾಟಕ ಸ್ಫರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಚಿತ್ರಕಲಾ ಶಿಕ್ಷಕರಾದ ಸದಾಶಿವ ಶಿವಗಿರಿ ಅವರನ್ನು ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಫಲ್ಯ ಗೌರವಿಸಿದರು.

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಉಪ ಯೋಜನಾ ಸಮನ್ವಯಧಿಕಾರಿ ಲೋಕೇಶ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಬಂಗೇರ, ಕಾರ್ಯದರ್ಶಿ ಪಲ್ಲವಿ ಕಾರಂತ, ಡಯಟ್ ಉಪನ್ಯಾಸಕ ಶ್ರೀನಿವಾಸ ಅಡಿಗ, ಗುರುಲಿಂಗಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯಶ್ರೀ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಆರತಿ ಅಮೀನ್, ತೀರ್ಪುಗಾರರಾದ ಗೋಪಾಲಕೃಷ್ಣ ಆದ್ಯಪಾಡಿ,ವಾಸುದೇವ ಕಾರಂತ ಉಪಸ್ಥಿತರಿದ್ದರು.

ಸ್ಫರ್ಧೆಯಲ್ಲಿ ಇಂದ್ರಪ್ರಸ್ಥ ಉಪ್ಪಿನಂಗಡಿ ಪ್ರಥಮ, ಕೊಣಾಜೆಪದವು ಸರಕಾರಿ ಪ್ರೌಢಶಾಲೆ ದ್ವಿತೀಯ, ಶಂಭೂರು ತೃತೀಯ ಸ್ಥಾನ ಪಡೆಯಿತು.

ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ಶಿಕ್ಷಕಿ ಸುಜಾತ  ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರಾದ ಸದಾಶಿವ ನಾಯಕ್, ಭಾರತಿ,ಪ್ರಕಾಶ್, ವರಮಹಾಲಕ್ಷ್ಮೀ, ವಸಂತಿ, ಚಿನ್ನಪ್ಪ ಜಾಲ್ಸೂರು ಸಹಕರಿಸಿದರು.

 www.bantwalnews.com Editor: Harish Mambady  Contact No: 9448548127

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶಂಭೂರು ಹೈಸ್ಕೂಲಿನಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ, ಇಂದ್ರಪ್ರಸ್ಥ ಪ್ರಥಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*