ಸರ್ಕಾರಿ ಕಚೇರಿ

ಋಣ ಪರಿಹಾರ ಕಾಯ್ದೆ – ಏನಿದು, ಇಲ್ಲಿದೆ ವಿವರ

ಮಂಗಳೂರು: ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ ಹೀಗಾಗಿ ಸಹಾಯಕ ಆಯುಕ್ತರು ಪುತ್ತೂರು ಉಪವಿಭಾಗ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಅದು ಹೀಗಿದೆ.

ಜಾಹೀರಾತು

ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೊಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. 

ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. 

ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ.

ಜಾಹೀರಾತು

ಬಂಟ್ವಾಳನ್ಯೂಸ್ – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ