ವಾಹನದಲ್ಲಿ ಸಾಗುವವರನ್ನು ದರೋಡೆ ಮಾಡುವ ಉದ್ದೇಶದಿಂದ ಮಾರಕಾಯುಧಗಳೊಂದಿಗೆ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪದ ಮೇರೆಗೆ ಐವರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕತ್ತಿ, ಸುಮಾರು 2 ಗ್ರಾಂ ತೂಕವಿರುವ ಗಾಂಜಾ ಮೋಗ್ಗು ವಶಪಡಿಸಿಕೊಂಡಿದ್ದಾರೆ.
ಜಾಹೀರಾತು
ಬುಧವಾರ ಬೆಳಗ್ಗೆ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಠಾಣಾ ಸಿಬ್ಬಂದಿ ಜೊತೆ ಗಸ್ತು ತಿರುಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಮಂಚಿ ಗ್ರಾಮ ಮಂಚಿ ಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದ ಉಮ್ಮರ್ ಫಾರೂಕ್ (26), ಮಹಮ್ಮದ್ ಅಬೂಬಕ್ಕರ್ (21), ಅಬ್ದುಲ್ ಖಾದರ್(40), ರಮೀಜ್ (22) ಮತ್ತು ಖಲೀಲ್ (24) ಎಂಬವರನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಅಕ್ಬರ್ ಎಂಬಾತ ತಪ್ಪಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದರೋಡೆಗೆ ಹೊಂಚು: ಬಂಟ್ವಾಳ ಪೊಲೀಸರಿಂದ ಐವರ ಸೆರೆ"
Be the first to comment on "ದರೋಡೆಗೆ ಹೊಂಚು: ಬಂಟ್ವಾಳ ಪೊಲೀಸರಿಂದ ಐವರ ಸೆರೆ"