ಐದು ದಿನಗಳ ಜಕ್ರಿಬೆಟ್ಟು ಗಣೇಶೋತ್ಸವ ಸಂಪನ್ನ

ಜಕ್ರಿಬೆಟ್ಟಿನ ದಾಸ ರೈ ಮೈದಾನದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ 16ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಮಾಪನಗೊಂಡಿತು.

PHOTOS: KISHORE PERAJE

ಜಾಹೀರಾತು

ಮಾಜಿ ಸಚಿವ ಬಿ. ರಮಾನಾಥ ರೈ ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಸಮಾನ ಮನಸ್ಕರ ಸಾರ್ವಜನಿಕ ಸಮಿತಿಯೊಂದಿಗೆ ಬಲ್ಲೋಡಿಗುತ್ತು ಪದ್ಮಶೇಖರ್ ಜೈನ್ ಅಧ್ಯಕ್ಷತೆಯಲ್ಲಿ ನಡೆದಿದೆ. ವಿಶಾಲ ಮಂಟಪದಲ್ಲಿ ಸುಂದರವಾದ ವಿನಾಯಕ ಭವ್ಯಮೂರ್ತಿ ಭಕ್ತರನ್ನು ಆಕರ್ಷಿಸಿದರೆ, ನಿತ್ಯ ನಿರಂತರ ಭಕ್ತರಿಗೆ ಅನ್ನಸಂತರ್ಪಣೆ, ಅತಿಥಿಗಳಿಗೆ ಸತ್ಕಾರದ ವ್ಯವಸ್ಥೆ ಗಮನ ಸೆಳೆಯಿತು.

ಪ್ರತಿದಿನ ಧಾರ್ಮಿಕ ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವಕ್ಕೆ ಮೆರುಗು ನೀಡಿದವು. ಶ್ರೀ ಗಣೇಶ ಮೂರ್ತಿಯ ಶೋಭಾ ಯಾತ್ರೆಯು ವಿವಿಧ ಜಿಲ್ಲೆಗಳ ಕಲಾ ತಂಡಗಳು, ಸ್ತಭ್ದ ಚಿತ್ರಗಳೊಂದಿಗೆ ವೈಭವಯುತವಾಗಿ ಸುರಿವ ಮಳೆಯನ್ನು ಲೆಕ್ಕಿಸದೆ ನಡೆಯಿತು. ನಾನಾ ಮಠಾಧೀಶರು, ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದ ಗಣೇಶೋತ್ಸವ ಸಭಾ ಕಾರ್ಯಕ್ರಮಗಳಲ್ಲಿ ಸಮಿತಿಯ ಗೌರವಾಧ್ಯಕ್ಷ ಮಾಜಿಸಚಿವ ಬಿ.ರಮಾನಾಥ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಗಣೇಶೋತ್ಸವದ ಉದ್ದೇಶದ ಕುರಿತು ವಿವರಿಸಿದರು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಪ್ರಮುಖರಾದ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ಬಿ.ಪ್ರವೀಣ್, ಜನಾರ್ದನ ಚಂಡ್ತಿಮಾರ್, ಸ್ಥಳದಾನಿ ಡಾ. ಶಿವಪ್ರಸಾದ್ ರೈ, ಸಂಪತ್ ಕುಮಾರ್ ಶೆಟ್ಟಿ, ಕೆ.ಜಗನ್ನಾಥ, ವಾಸು ಪೂಜಾರಿ, ಪದ್ಮನಾಭ ರೈ, ಪ್ರವೀಣ್ ಕಿಣಿ, ಗಂಗಾಧರ ಪೂಜಾರಿ, ಪ್ರಶಾಂತ್ ಕುಲಾಲ್ ಸಹಿತ ನಾನಾ ಕ್ಷೇತ್ರಗಳ ಗಣ್ಯರು ಸಹಕರಿಸಿದರು. ಎಡ್ತೂರು ರಾಜೀವ ಶೆಟ್ಟಿ, ರಾಜೀವ ಕಕ್ಯಪದವು, ಚೇತನ್ ರೈ ಮಾಣಿ ಮತ್ತಿತರರು ವಿವಿಧ ಕಾರ್ಯಕ್ರಮಗಳನ್ನು ನಿರೂಪಿಸಿದರು.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಐದು ದಿನಗಳ ಜಕ್ರಿಬೆಟ್ಟು ಗಣೇಶೋತ್ಸವ ಸಂಪನ್ನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*