ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದಿಂದ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಸ್ಮೃತಿ ನಮನ ಮಾಸದ ನೆನಪು ಕಾರ್ಯಕ್ರಮದ ಅಂಗವಾಗಿ ಸೆ.21ರಂದು ಶನಿವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 3ರಿಂದ ಏರ್ಯರ ಆಯ್ದ ಕವನಗಳ ಗಾಯನ ಗಣಪತಿ ಪದ್ಯಾಣ ಅವರಿಂದ ನಡೆಯಲಿದೆ. ಬಳಿಕ 3.30ರಿಂದ ಸ್ಮೃತಿ ನಮನ ಕಾರ್ಯಕ್ರಮ ಪ್ರೊ. ಎಂ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಗಾಂಧೀಜಿ ಮತ್ತು ಗ್ರಾಮರಾಜ್ಯ ಕುರಿತು ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಉಪನ್ಯಾಸ ನೀಡುವರು. 4.30ರಿಂದ ಕೋದಂಡದ ಕೊನೆ ಎಂಬ ಶ್ರೀರಾಮಾವತಾರದ ಮಂಗಲ ಮುಕ್ತಾಯವನ್ನು ಅಭಿವ್ಯಕ್ತಿಗೊಳಿಸುವ ಏಕವ್ಯಕ್ತಿ ನಾಟಕದ ಪ್ರೊ. ಉದ್ಯಾವರ ಮಾಧವಾಚಾರ್ಯ ರಂಗಕೃತಿ, ನಿರ್ದೇಶನದ ನೃತ್ಯಪ್ರಸ್ತುತಿಯನ್ನು ಭ್ರಮರಿ ಶಿವಪ್ರಕಾಶ್ ನಡೆಸಿಕೊಡಲಿದ್ದಾರೆ ಎಂದು ಕಸಾಪ ಬಂಟ್ವಾಳ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಡಾ. ಏರ್ಯ ಸ್ಮೃತಿ, ನಮನ : ಸೆ.21ರಂದು ಬಿ.ಸಿ.ರೋಡಿನಲ್ಲಿ ಕಾರ್ಯಕ್ರಮ"