ಬಂಟ್ವಾಳ

ಅಭಾವಿಪ ಬಂಟ್ವಾಳ ಅಭ್ಯಾಸವರ್ಗ

ಅಭಾವಿಪ ಬಂಟ್ವಾಳ ದಿಂದ ತಾಲೂಕು ಅಭ್ಯಾಸ ‌ವರ್ಗ ಕಾರ್ಯಕ್ರಮ ಬಿ. ಸಿ.ರೋಡ್ ನ ಸಂಘ ಕಾರ್ಯಾಲಯದಲ್ಲಿ ಜರುಗಿತು. ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತ ಪ್ರದೀಪ್ ಅಜ್ಜಿಬೆಟ್ಟು ಉದ್ಘಾಟಿಸಿದರು.

ಜಾಹೀರಾತು

ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕ ಆಶಿಶ್ ಅಜ್ಜಿಬೆಟ್ಟು ,ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್ ಕೊಯಿಲ ಹಾಗೂ ವಿವಿಧ ಕಾಲೇಜುಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲನೇ ಅವಧಿ ಸೈದ್ಧಾಂತಿಕ ಭೂಮಿಕೆ ಯನ್ನು ವಿದ್ಯಾರ್ಥಿ ಪರಿಷತ್ ನ ವೃತ್ತಿ ಶಿಕ್ಷಣ ಸಹ ಸಂಚಾಲಕ ಸಂದೇಶ್ ರೈ ಮಜಕ್ಕಾರ್ ನಿರ್ವಹಿಸಿದರು. ದ್ವಿತೀಯ ಅವಧಿ ಕ್ಯಾಂಪಸ್ ಕಾರ್ಯ ಹಾಗೂ ಹೋರಾಟವನ್ನು ಮಂಗಳೂರು ಜಿಲ್ಲಾ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ನಡೆಸಿಕೊಟ್ಟರು. ಮೂರನೇ ಅವಧಿ ನಮ್ಮ ಕಾರ್ಯಪದ್ಧತಿ ಅನ್ನು ಮಂಗಳೂರು ನಗರ ಸಹಕಾರ್ಯದರ್ಶಿ ಮಣಿಕಂಠ ಕಳಶ ನಡೆಸಿಕೊಟ್ಟರು. ನಾಲ್ಕನೇ ಅವಧಿಯಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಆಳ್ವ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾತನಾಡಿದರು.

ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿ ಪರಿಷತ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕೇಶವ ಬಂಗೇರ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಚಿಂತನೆ ಯ ಕುರಿತು ಸಮಾರೋಪ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ನೂತನ ನಗರ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಅಖಿಲಾಷ್ ಅವರಿಗೆ ಧ್ವಜ ನೀಡುವ ಮೂಲಕ ಶುಭಾಶಯ ಕೋರಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.