ಕಲ್ಲಡ್ಕ

ಗೋಳ್ತಮಜಲು ಮಂಚಿ ರಸ್ತೆ ದುರಸ್ತಿ: ಆಟೊ ಚಾಲಕರಿಂದ ಮನವಿ

ಗೋಳ್ತಮಜಲಿನಿಂದ ಬೋಳಂತೂರು, ಮಂಚಿ ರಸ್ತೆಯ ಮರುಡಾಮರೀಕರಣ ಹಾಗೂ ಚರಂಡಿ ವ್ಯವಸ್ಥೆಗೊಳಿಸುವಂತೆ ಬೋಳಂತೂರು ರಿಕ್ಷಾ ಚಾಲಕ – ಮಾಲಕ ಸಂಘದವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಅವರಿಗೆ ಮನವಿ ಸಲ್ಲಿಸಿದರು.

ಈ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರ ಹಾಗೂ ನಡೆದಾಡಲು ಕಷ್ಟಕರವಾಗಿದೆ, ಇಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದಾಡುತ್ತಿದ್ದು ವಾಹನ ಸಂಚರಿಸುವಾಗ ಶಾಲಾ ಮಕ್ಕಳ ಮೇಲೆ ಕೆಸರು ನೀರಿನ ಸಿಂಚನವಾಗುತ್ತಿದೆ, ರಸ್ತೆಯ ಮರು ಡಾಮರೀಕರಣ ಹಾಗೂ ಚರಂಡಿ ನಿರ್ಮಿಸುವ ಮೂಲಕ ಜನತೆಯ ಸಂಕಷ್ಟವನ್ನು ನಿವಾರಿಸುವಂತೆ ಮನವಿಯಲ್ಲಿ ವಿನಂತಿಸಲಾಗಿದೆ. ಈ ಸಂದರ್ಭ ರಿಕ್ಷಾ ಚಾಲಕ – ಮಾಲಕ ಸಂಘದ ಅದ್ಯಕ್ಷ ಎಸ್.ಎಚ್.ಅಬೂಬಕ್ಕರ್, ಕಾರ್ಯದರ್ಶಿ ಹಸೈನಾರ್, ಪ್ರಮುಖರಾದ ದುನಿಯಾ ಅದ್ರಾಮ ಬೋಳಂತೂರು, ಉದಯ ಕುಮಾರ್, ಬಿ.ಕೆ.ಅಬ್ದುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ