ಅನರ್ಹ ಬಿಪಿಎಲ್ ಕಾರ್ಡು ತಂದೊಪ್ಪಿಸಿ, ಇಲ್ಲವೇ ಕ್ರಮ ಎದುರಿಸಿ: ತಹಶೀಲ್ದಾರ್

ಬಂಟ್ವಾಳ ತಾಲೂಕಿನಲ್ಲಿ ಬಿಪಿಎಲ್ ಕಾರ್ಡು ಪಡೆಯಲು ಅನರ್ಹರಿದ್ದರೂ ಕೆಲವರು ಸುಳ್ಳು ಮಾಹಿತಿ ನೀಡಿ ಪಡೆದಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಅಂಥವರು ಸ್ವಯಂಪ್ರೇರಿತರಾಗಿ ಪಡಿತರ ಚೀಟಿಯನ್ನು ಬಂಟ್ವಾಳ ಮಿನಿ ವಿಧಾನಸೌಧದ ಆಹಾರ ಶಾಖೆಗೆ 2019, ಸೆ.30ರೊಳಗೆ ನೀಡಬೇಕು, ತಪ್ಪಿದಲ್ಲಿ ಅಗತ್ಯ ವಸ್ತುಗಳ ಕಾಯಿದೆ 1955ರಡಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಎಚ್ಚರಿಸಿದ್ದಾರೆ.

ಜಾಹೀರಾತು

www.bantwalnews.com Editor: Harish Mambady

ಈ ಕುರಿತು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಲಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ ಕೆಲವು ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿದಾರರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹದಿದ್ದರೂ ಚೀಟಿ ಪಡೆದು, ಅದರ ಸವಲತ್ತುಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ಪಡಿತರ ಚೀಟಿದಾರರು ಸುಳ್ಳು ಮಾಹಿತಿ ನೀಡಿ ಪರಿತರ ಚೀಟಿ ಪಡೆದಿದ್ದರೆ, ಇನ್ನು ಕೆಲವರು ಬಿಪಿಎಲ್ ಪಡಿತರ ಚಚೀಟಿ ಪಡೆದು, ನಂತರ ಬಿಪಿಎಲ್ ಗೆ ಅನರ್ಹರಾಗಿರುವುದು ಕಂಡುಬಂದಿದೆ. ನಾಲ್ಕು ಚಕ್ರದ ಬಿಳಿ ನಂಬರ್ ಪ್ಲೇಟ್ ನ ವಾಹನ ಹೊಂದಿರುವವರು ಕುಟುಂಬದಲ್ಲಿ ಸರಕಾರಿ ಅಥವಾ ಅರೆ ಸರಕಾರಿ ಉದ್ಯೋಗ ಹೊಂದಿರುವವರು, ಆದಾಯ ತೆರಗೆ ಪಾವತಿಸುವವರು, ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯ ಇಲ್ಲದೇ ಇರುವವರು, ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು, ಮರಣ ಹೊಂದಿದವರ , ಕುಟುಂಬದಲ್ಲಿ ವಾಸವಿಲ್ಲದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು, 7.5 ಎಕ್ರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವವರು, ವಾರ್ಷಿಕ ಆದಾಯ 1,20,000ಕ್ಕಿಂತ ಹೆಚ್ಚು ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚ.ಅಡಿಗಿಂತ ಹೆಚ್ಚು ವಿಸ್ತೀರ್ಣದ ಮನೆಯನ್ನು ಹೊಂದಿರುವ ಕುಟುಂಬಗಳಲ್ಲಿರುವವರೂ ಬಿಪಿಎಲ್ ಕಾರ್ಡು ಹೊಂದಿರುವ ಕುರಿತು ಗಮನಕ್ಕೆ ಬಂದಿದೆ. ಅಂಥ ಕುಟುಂಬವು ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಕೆಲಸ ನಿಧಾನ:

ಸೆ.11ರಿಂದ ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಯ ಕೆಲಸದ ವೇಳೆಯಲ್ಲಿ ಪುನರ್ ಪ್ರಾರಂಭಿಸಲಾಗಿದೆ. ಪಡಿತರ ಚೀಟಿಯಲ್ಲಿರುವ ಸದಸ್ಯರು ಈ ದಿನಾಂಕದಿಂದ ನವೆಂಬರ್ 2019ರ ಅಂತ್ಯದೊಳಗೆ ನ್ಯಾಯಬೆಲೆ ಅಂಗಡಿಗೆ ಆಧಾರ್ ದಾಖಲೆ ಜೊತೆ ಹಾಜರಾಗಿ ಬೆರಳಚ್ಚು ನೀಡಬೇಕಾಗಿ ಪ್ರಕಟಣೆ ತಿಳಿಸಿದೆ. ಇ ಕೈವೈಸಿ ಕಾರಣಗಳಿಂದ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಪಡಿತರ ಚೀಟಿಗೆ ಸಂಬಂಧಿಸಿದ ಕೆಲಸಗಳು ತಾಲೂಕು ಕಚೇರಿಯಲ್ಲಿ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಇದ್ದು, ಕಾರ್ಡುದಾರರು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನರ್ಹ ಬಿಪಿಎಲ್ ಕಾರ್ಡು ತಂದೊಪ್ಪಿಸಿ, ಇಲ್ಲವೇ ಕ್ರಮ ಎದುರಿಸಿ: ತಹಶೀಲ್ದಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*