ಕಲ್ಲಡ್ಕದಲ್ಲಿ ಸಮಾವೇಶಗೊಂಡರು 119 ಜೋಡಿ ನವದಂಪತಿ

www.bantwalnews.com

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 19ನೇ ವರ್ಷದ ನವದಂಪತಿ ಸಮಾವೇಶದಲ್ಲಿ 119 ಜೋಡಿ ನವದಂಪತಿ ಪಾಲ್ಗೊಂಡರು. ಹಿರಿಯ ದಂಪತಿಗಳಾದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜಾಹೀರಾತು

ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಮದುವೆಗೆ ಅದರದ್ದೇ ಆದ ಸ್ವರೂಪವಿದೆ, ಪ್ರಾಶಸ್ತ್ಯವಿದೆ. ಮದುವೆಯು ಒಂದು ಪವಿತ್ರವಾದ ಸಂಬಂಧ. ಧರ್ಮದ ಆಧಾರದಲ್ಲಿ ಮುಂದಿನ ಪೀಳಿಗೆಯನ್ನು ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿರುತ್ತದೆ ಎಂದರು.

ಜ್ಯೇಷ್ಠ ಪ್ರಚಾರಕರು, ಕುಟುಂಬ ಪ್ರಬೋಧನ್ ಸಹಸಂಯೋಜಕ ಸು.ರಾಮಣ್ಣ ಮಾತನಾಡಿ,ಮಾರ್ಗದರ್ಶನ ನೀಡಿ ಸಮಾರೋಪದ ಮಾತುಗಳನ್ನಾಡಿದರು.

ಹಿರಿಯ ದಂಪತಿಯಾಗಿ ಆಗಮಿಸಿದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ನವದಂಪತಿಗೆ ಜೀವನಾನುಭವ ತಿಳಿಸಿಕೊಟ್ಟರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ದಂಪತಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸಹಸಂಚಾಲಕ ರಮೇಶ್ ಉಪಸ್ಥಿತರಿದ್ದರು. ಡಾ. ಕಮಲಾ ಪ್ರಭಾಕರ ಭಟ್, ಎಲ್ಲಾ ವಿಭಾಗದ ಪ್ರಮುಖರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಉಪಸ್ಥಿತರಿದ್ದರು. ರಶ್ಮಿತಾ ಪ್ರಾರ್ಥನೆ ಮಾಡಿ, ಸುಧಾ ಭಟ್ ಸ್ವಾಗತಿಸಿದರು, ಶುಭಲಕ್ಷ್ಮಿ ಸತೀಶ್ ಧನ್ಯವಾದಗೈದರು. ಸ್ವಾತಿ ಕೃಷ್ಣಪ್ಪ ನಿರ್ವಹಿಸಿದರು.

 

Editor: Harish Mambady

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕದಲ್ಲಿ ಸಮಾವೇಶಗೊಂಡರು 119 ಜೋಡಿ ನವದಂಪತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*