ಕಲ್ಲಡ್ಕ

ಕಲ್ಲಡ್ಕದಲ್ಲಿ ಸಮಾವೇಶಗೊಂಡರು 119 ಜೋಡಿ ನವದಂಪತಿ

www.bantwalnews.com

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 19ನೇ ವರ್ಷದ ನವದಂಪತಿ ಸಮಾವೇಶದಲ್ಲಿ 119 ಜೋಡಿ ನವದಂಪತಿ ಪಾಲ್ಗೊಂಡರು. ಹಿರಿಯ ದಂಪತಿಗಳಾದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜಾಹೀರಾತು

ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಮದುವೆಗೆ ಅದರದ್ದೇ ಆದ ಸ್ವರೂಪವಿದೆ, ಪ್ರಾಶಸ್ತ್ಯವಿದೆ. ಮದುವೆಯು ಒಂದು ಪವಿತ್ರವಾದ ಸಂಬಂಧ. ಧರ್ಮದ ಆಧಾರದಲ್ಲಿ ಮುಂದಿನ ಪೀಳಿಗೆಯನ್ನು ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿರುತ್ತದೆ ಎಂದರು.

ಜ್ಯೇಷ್ಠ ಪ್ರಚಾರಕರು, ಕುಟುಂಬ ಪ್ರಬೋಧನ್ ಸಹಸಂಯೋಜಕ ಸು.ರಾಮಣ್ಣ ಮಾತನಾಡಿ,ಮಾರ್ಗದರ್ಶನ ನೀಡಿ ಸಮಾರೋಪದ ಮಾತುಗಳನ್ನಾಡಿದರು.

ಹಿರಿಯ ದಂಪತಿಯಾಗಿ ಆಗಮಿಸಿದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ನವದಂಪತಿಗೆ ಜೀವನಾನುಭವ ತಿಳಿಸಿಕೊಟ್ಟರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ದಂಪತಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸಹಸಂಚಾಲಕ ರಮೇಶ್ ಉಪಸ್ಥಿತರಿದ್ದರು. ಡಾ. ಕಮಲಾ ಪ್ರಭಾಕರ ಭಟ್, ಎಲ್ಲಾ ವಿಭಾಗದ ಪ್ರಮುಖರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಉಪಸ್ಥಿತರಿದ್ದರು. ರಶ್ಮಿತಾ ಪ್ರಾರ್ಥನೆ ಮಾಡಿ, ಸುಧಾ ಭಟ್ ಸ್ವಾಗತಿಸಿದರು, ಶುಭಲಕ್ಷ್ಮಿ ಸತೀಶ್ ಧನ್ಯವಾದಗೈದರು. ಸ್ವಾತಿ ಕೃಷ್ಣಪ್ಪ ನಿರ್ವಹಿಸಿದರು.

 

Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.