ಕಲ್ಲಡ್ಕ

ಕಲ್ಲಡ್ಕದಲ್ಲಿ ಸಮಾವೇಶಗೊಂಡರು 119 ಜೋಡಿ ನವದಂಪತಿ

www.bantwalnews.com

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 19ನೇ ವರ್ಷದ ನವದಂಪತಿ ಸಮಾವೇಶದಲ್ಲಿ 119 ಜೋಡಿ ನವದಂಪತಿ ಪಾಲ್ಗೊಂಡರು. ಹಿರಿಯ ದಂಪತಿಗಳಾದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜಾಹೀರಾತು

ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಮದುವೆಗೆ ಅದರದ್ದೇ ಆದ ಸ್ವರೂಪವಿದೆ, ಪ್ರಾಶಸ್ತ್ಯವಿದೆ. ಮದುವೆಯು ಒಂದು ಪವಿತ್ರವಾದ ಸಂಬಂಧ. ಧರ್ಮದ ಆಧಾರದಲ್ಲಿ ಮುಂದಿನ ಪೀಳಿಗೆಯನ್ನು ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿರುತ್ತದೆ ಎಂದರು.

ಜ್ಯೇಷ್ಠ ಪ್ರಚಾರಕರು, ಕುಟುಂಬ ಪ್ರಬೋಧನ್ ಸಹಸಂಯೋಜಕ ಸು.ರಾಮಣ್ಣ ಮಾತನಾಡಿ,ಮಾರ್ಗದರ್ಶನ ನೀಡಿ ಸಮಾರೋಪದ ಮಾತುಗಳನ್ನಾಡಿದರು.

ಜಾಹೀರಾತು

ಹಿರಿಯ ದಂಪತಿಯಾಗಿ ಆಗಮಿಸಿದ ಪ್ರೊ.ಬಾಲಕೃಷ್ಣ ಕಲ್ಲೂರಾಯ ಹಾಗೂ ಮೀನಾಕ್ಷಿ ನವದಂಪತಿಗೆ ಜೀವನಾನುಭವ ತಿಳಿಸಿಕೊಟ್ಟರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ದಂಪತಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸಹಸಂಚಾಲಕ ರಮೇಶ್ ಉಪಸ್ಥಿತರಿದ್ದರು. ಡಾ. ಕಮಲಾ ಪ್ರಭಾಕರ ಭಟ್, ಎಲ್ಲಾ ವಿಭಾಗದ ಪ್ರಮುಖರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಉಪಸ್ಥಿತರಿದ್ದರು. ರಶ್ಮಿತಾ ಪ್ರಾರ್ಥನೆ ಮಾಡಿ, ಸುಧಾ ಭಟ್ ಸ್ವಾಗತಿಸಿದರು, ಶುಭಲಕ್ಷ್ಮಿ ಸತೀಶ್ ಧನ್ಯವಾದಗೈದರು. ಸ್ವಾತಿ ಕೃಷ್ಣಪ್ಪ ನಿರ್ವಹಿಸಿದರು.

 

ಜಾಹೀರಾತು

Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ