ಬೆಳ್ತಂಗಡಿ ತಾಲೂಕಿನ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದವರು 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆನೆ ದಂತ ಮಾರಾಟ ಜಾಲವೊಂದನ್ನು ಬೇಧಿಸಿರುವ ಪುತ್ತೂರು ಅರಣ್ಯ ಸಂಚಾರಿ ದಳದವರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ತೂಕ 51 ಕೆ.ಜಿ.
ಆನೆ ದಂತಗಳನ್ನು ಶೇಖರಿಸಿಟ್ಟು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದವರು ಬೆಳ್ತಂಗಡಿ ತಾಲೂಕಿನ ಸೂರ್ಯ ಎಂಬಲ್ಲಿನ ಮನೆಯೊಂದಕ್ಕೆ ದಾಳಿ ಮಾಡಿದಾಗ ಅಲ್ಲಿ ಹತ್ತು ದಂತಗಳಿರುವುದು ಕಂಡುಬಂದಿದೆ. ಈ ಸಂಬಂಧ ಅಬ್ರಹಾಂ, ಅನ್ವರ್ ಮತ್ತು ಸುರೇಶ್ ಬಾಬು ಎಂಬವರನ್ನು ದಸ್ತಗಿರಿ ಮಾಡಿಕೊಳ್ಳಲಾಗಿದೆ. ಇನ್ನೊಬ್ಬ ಆಪಾದಿತ ತಲೆಮರೆಸಿಕೊಂಡಿದ್ದಾನೆ. ಇದರ ಹಿಂದೆ ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…