ಜಿಲ್ಲಾ ಸುದ್ದಿ

ದಂತಚೋರರ ಸೆರೆ, 51 ಕೆ.ಜಿ.ಯ 10 ಆನೆ ದಂತ ವಶಕ್ಕೆ

ಬೆಳ್ತಂಗಡಿ ತಾಲೂಕಿನ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದವರು 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು  ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು

ಆನೆ ದಂತ ಮಾರಾಟ ಜಾಲವೊಂದನ್ನು ಬೇಧಿಸಿರುವ ಪುತ್ತೂರು ಅರಣ್ಯ ಸಂಚಾರಿ ದಳದವರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ತೂಕ 51 ಕೆ.ಜಿ.

ಆನೆ ದಂತಗಳನ್ನು ಶೇಖರಿಸಿಟ್ಟು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದವರು ಬೆಳ್ತಂಗಡಿ ತಾಲೂಕಿನ ಸೂರ್ಯ ಎಂಬಲ್ಲಿನ ಮನೆಯೊಂದಕ್ಕೆ ದಾಳಿ ಮಾಡಿದಾಗ ಅಲ್ಲಿ ಹತ್ತು ದಂತಗಳಿರುವುದು ಕಂಡುಬಂದಿದೆ. ಈ ಸಂಬಂಧ ಅಬ್ರಹಾಂ, ಅನ್ವರ್ ಮತ್ತು ಸುರೇಶ್ ಬಾಬು ಎಂಬವರನ್ನು ದಸ್ತಗಿರಿ ಮಾಡಿಕೊಳ್ಳಲಾಗಿದೆ. ಇನ್ನೊಬ್ಬ ಆಪಾದಿತ ತಲೆಮರೆಸಿಕೊಂಡಿದ್ದಾನೆ. ಇದರ ಹಿಂದೆ ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ