ಬಂಟ್ವಾಳ

ಮಾಣಿ, ಮಣಿನಾಲ್ಕೂರಲ್ಲಿ ಎಪಿಎಂಸಿ ಮುಚ್ಚು ಹರಾಜುಕಟ್ಟೆ ಉದ್ಘಾಟನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಂಟ್ವಾಳ ವತಿಯಿಂದ ತಾಲೂಕಿನ ಮಾಣಿ ಎಂಬಲ್ಲಿ ೪೯.೧೯ ಲಕ್ಷ ರೂ ವೆಚ್ಚದಲ್ಲಿ ಹಾಗೂ ಮಣಿನಾಲ್ಕೂರು ಎಂಬಲ್ಲಿ ೧೭.೨೨ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಮುಚ್ಚು ಹರಾಜುಕಟ್ಟೆ ಕಟ್ಟಡಗಳ ಉದ್ಘಾಟನೆ ಮತ್ತು ಗ್ರಾಮ ಪಂಚಾಯತ್‌ಗಳಿಗೆ ಹಸ್ತಾಂತರ ಕಾರ್ಯಕ್ರಮ ಬುಧವಾರ ಮಾಣಿಯಲ್ಲಿ ನಡೆಯಿತು.

ಜಾಹೀರಾತು

ಮಣಿನಾಲ್ಕೂರಿನಲ್ಲಿ ಉದ್ಘಾಟನೆ ಕಾರ್ಯಕ್ರಮದ ಬಳಿಕ ಮಾಣಿಯಲ್ಲಿ ಹರಾಜುಕಟ್ಟೆ ಕಟ್ಟಡವನ್ನು ಉದ್ಘಾಟಿಸಿ, ಸಮಾರಂಭವನ್ನು ಜ್ಯೋತಿ ಬೆಳಗಿಸಿ ಮಾತನಾಡಿದ ಬಂಟ್ವಾಳ ಶಾಸಕ ಯು.ರಾಜೇಶ್ ನಾಕ್, ಹರಾಜುಕಟ್ಟೆಗಳಿಂದ ರೈತರ ಉತ್ಪನ್ನಗಳು ಗ್ರಾಹಕರಿಗೆ ಸುಲಭವಾಗಿ ತಲುಪಲು ವೇದಿಕೆಯಾಗಲಿ ಎಂದು ಶುಭ ಹಾರೈಸಿ. ಕೇಂದ್ರ ಸ್ಥಾನದಲ್ಲಿರುವ ಕಟ್ಟಡ ಸುಸಜ್ಜಿತವಾಗಿ ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಲಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ತನ್ನ ಅವಧಿಯಲ್ಲಿ ಎಪಿಎಂಸಿಗೆ ನೀಡಲಾದ ಅನುದಾನದಿಂದ ಮುಚ್ಚು ಹರಾಜುಕಟ್ಟೆಗಳ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಮಾಣಿ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಇಲ್ಲಿ ಎಸ್ಪಿ ಕಚೇರಿ, ಸರಕಾರಿ ಆಸ್ಪತ್ರೆ ನಿರ್ಮಿಸಿದರೆ ಜನರಿಗೆ ಅನುಕೂಲವಾಗುತ್ತದೆ. ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಂಡಿದೆ. ಎಪಿಎಂಸಿ ಪ್ರಾಂಗಣಕ್ಕೆ ರೈತರು ಬರುವಂತಾಗಲು ಶುಚಿತ್ವ ಕಾಪಾಡುವುದೂ ಮುಖ್ಯ ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಮಾತನಾಡಿ, ಎಪಿಎಂಸಿ ಹರಾಜುಕಟ್ಟೆ ಕಟ್ಟಡಗಳಲ್ಲದೆ, ಮಾಣಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವೂ ಶೀಘ್ರ ಒದಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಎಪಿಎಂಸಿ ಕೈಗೊಂಡ ಯೋಜನೆಗಳು ಮತ್ತು ಭವಿಷ್ಯದಲ್ಲಿ ಮೇಲ್ಕಾರ್ ನಲ್ಲಿ ಯಾರ್ಡ್ ನಿರ್ಮಿಸುವ ವಿಚಾರವನ್ನು ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ರವೀಂದ್ರ ಕಂಬಳಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ,  ತಾಪಂ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾಪಂ ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಎಪಿಎಂಸಿ ಸದಸ್ಯ ನೇಮಿರಾಜ ರೈ,  ಪದ್ಮರಾಜ ಬಲ್ಲಾಳ್, ಭಾರತಿ ಎಸ್. ರೈ, ದಿವಾಕರ ಪಂಬದಬೆಟ್ಟು, ಹರಿಶ್ಚಂದ್ರ ಪೂಜಾರಿ, ಬಿ.ಚಂದ್ರಶೇಖರ ರೈ, ಗೀತಾಲತಾ ಟಿ.ಶೆಟ್ಟಿ, ಜಗದೀಶ ಡಿ, ನೇಮಿರಾಜ ರೈ, ವಿಠಲ ಸಾಲ್ಯಾನ್, ಬಾಲಕೃಷ್ಣ ಆಳ್ವ, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಗೌಡ ಇದ್ದರು. ಇದೇ ವೇಳೆ ಗ್ರಾಪಂಗಳಿಗೆ ಕಟ್ಟಡ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಎಪಿಎಂಸಿ ಕಾರ್ಯದರ್ಶಿ ಭಾರತಿ ಪಿ.ಎಸ್. ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ