ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದ ದರ್ಪಣ ತೀರ್ಥ ನದಿ ಸೋಮವಾರ ಉಕ್ಕಿ ಹರಿಯಲಾರಂಭಿಸಿತು.
ಕುಮಾರ ಪರ್ವತದಿಂದ ಹರಿದು ಬರುತ್ತಿರುವ ಈ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು,ಆದಿ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿತು. ರಥಬೀದಿಯ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಕುಕ್ಕೆ ಸುಬ್ರಹ್ಮಣ್ಯ ದಿಂದ ಆದಿ ಸುಬ್ರಹ್ಮಣ್ಯ ಸಂಪರ್ಕಿಸುವ ಕಿರು ಸೇತುವೆಯೂ ಮುಳುಗಡೆಯಾಯಿತು. ನದಿ ತೀರದ ಕೃಷಿ ಭೂಮಿಗಳೂ ಮುಳುಗಡೆಯಾಗಿದೆ. ಅಲ್ಲದೆ ದರ್ಪಣ ತೀರ್ಥ ನದಿ ಪಾತ್ರದಲ್ಲಿರುವ ಮನೆಗಳು ಹಾಗೂ ಕೆಲವು ವಸತಿ ಗೃಹಗಳಿಗೂ ನೀರು ನುಗ್ಗಿತ್ತು.