ಬಂಟ್ವಾಳ

ಇರಾದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ, ಪೌಷ್ಠಿಕ ಆಹಾರ ಸಪ್ತಾಹ

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಶಿಶು  ಅಬಿವೃಧ್ದಿ ಯೋಜನೆ ವಿಟ್ಲ ಮಂಚಿ ವಲಯ, ಗ್ರಾಮ ಪಂಚಾಯತ್ ಇರಾ ಪ್ರಾಥಮಿಕ ಆರೋಗ್ಯ ಕೇಂದ್ರಮಂಚಿ, ಸ್ತ್ರೀಶಕ್ತಿ ಗೊಂಚಲು ಇವರ ಸಂಯುಕ್ತ ಆಶ್ರಯದಲ್ಲಿ  ಇರಾ ಮಲೆಯಾಲಿ ಬಿಲ್ಲವ ಸಂಘದ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ, ಹೆಣ್ಣು ಮಕ್ಕಳ ಶಿಶು ಪ್ರದರ್ಶನ, ಮಹಿಳಾ ಗ್ರಾಮ ಸಭೆ ನಡೆಯಿತು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ ಉದ್ಘಾಟಿಸಿದರು. ತಮ್ಮ ಮಕ್ಕಳನ್ನು ಉತ್ತಮ ರೀತೀಯಲ್ಲಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಶ್ಲಾಘಾನೀಯೆಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ಮಾತನಾಡಿ ಸ್ಥಳೀಯವಾಗಿ ಸಿಗುವಂತಹ ಆಹಾರ  ಪದಾರ್ಥಗಳಿಂದ ಅತೀ ಹೆಚ್ಚಿನ ಪೋಷಕಾಂಶಗಳನ್ನು ಪಡೆಯಬಹುದು. ಪ್ರಕೃತಿ ನಮಗೆ ಆಹಾರ ನೀಡುತ್ತಿದೆ ಆದರೆ ನಾವು ಸರಯಾಗಿ ಬಳಸಿಕೊಳ್ಳಬೇಕು ಎಂದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಮಾತನಾಡಿದರು. ಬಂಟ್ವಾಳ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಾದ ಗಾಯತ್ರಿ ಕಂಬಳಿ ದಿನ ನಿತ್ಯದ ಬಳಕೆಯ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ವಿಟ್ಲ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಾದ ಸುಧಾ ಜೋಷಿ ಪೋಷಣ್ ಅಭಿಯಾನ ಮಾಸಾಚರಣೆ ಬಗ್ಗೆ, ವಿಶ್ವ ಪೌಷ್ಟಿಕ ಆಹಾರ ಸಪ್ತಾಹದ ಉಧ್ಧೇಶ ಬಗ್ಗೆ, ಶಿಶು ಪ್ರರ್ಶನದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಆರೋಗ್ಯ ಸಹಾಯಕಿ ರಾಧ ಗರ್ಭಿಣಿಯರ ಆರೈಕೆ, ಎದೆ ಹಾಲಿನ ಮಹತ್ವ, ರಾಷ್ಟ್ರೀಯ ಜಂತು ಹುಳ ನಿವಾರಣಾ ದಿನಾಚರಣೆ  ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು . ಅಂಗನವಾಡಿ ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು. ಇರಾ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸುಶೀಲಾ ವಂದಿಸಿದರು. ಇರಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಳಿನಿ, ಸದಸ್ಯರಾದ ಮೊಯಿದು ಕುಂಞಿ, ರಮೇಶ್, ಹಿರಿಯರಾದ ವಾಮನ ಪೂಜಾರಿ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts