ಬಂಟ್ವಾಳ

ರೋಟರಿ, ಸರಕಾರಿ ಪದವಿ ಕಾಲೇಜು ವತಿಯಿಂದ ರಕ್ತದಾನ ಶಿಬಿರ

ರೋಟರಿ ಕ್ಲಬ್ ಬಂಟ್ವಾಳ ಹಾಗೂ ಸರ್ಕಾರಿ ಪದವಿ ಕಾಲೇಜು ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ರೋಟರಿ ಕ್ಲಬ್ ಮತ್ತು ಸರಕಾರಿ ಕಾಲೇಜು ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷೆ ಶಿವಾನಿ ಆರ್. ಬಾಳಿಗಾ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷೆ ಶಿವಾನಿ ಬಾಳಿಗ ಮಾತನಾಡಿ ರಕ್ತದಾನ ಶ್ರೇಷ್ಠ ದಾನ ಇಂತಹ ಸಮಾಜ ಮುಖಿ ಕಾರ್ಯಕ್ರಮಗಳನ್ನ ನಡೆಸಲು ಬಂಟ್ವಾಳ ರೋಟರಿ ಕ್ಲಬ್ ಸದಾ ಸಿದ್ದ ಎಂದು ಹೇಳಿದರು.

ಜಾಹೀರಾತು

ಸರ್ಕಾರಿ ಪದವಿ ಕಾಲೇಜು ಬಂಟ್ವಾಳ ದ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಹಾಗೂ ರೋಟರ್‍ಯಾಕ್ಟ್  ಕ್ಲಬ್ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿಯ ಸಹ ಆಶ್ರಯದಲ್ಲಿ ನಡೆದ ಶಿಬಿರದಲ್ಲಿ ರೋಟರಿ ಸಹಾಯಕ ಗವರ್ನರ್ ರಿತೇಶ್ ಬಾಳಿಗ, ನಿಯೋಜಿತ ಅಧ್ಯಕ್ಷ ನಾರಾಯಣ ಹೆಗ್ಡೆ,  ರೋಟರಾಕ್ಟ್ ಚೇರ್ಮನ್ ವಸಂತ ಪ್ರಭು, ಉಪನ್ಯಾಸಕರಾದ ಡಾ. ಸತೀಶ್ ಗಟ್ಟಿ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಹೈದರಾಲಿ, ರೆಡ್ ಕ್ರಾಸ್ ಸಂಚಾಲಕಿ ಶಶಿಕಲಾ ಉಪಸ್ಥಿತರಿದ್ದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ರಕ್ತನಿಧಿ ಯ ಆಂಟನಿ ಹಾಗೂ ತಂಡ ಸಹಕರಿಸಿದರು. ಉಪನ್ಯಾಸಕ ನಂದಕಿಶೋರ್ ಎಸ್ ಸ್ವಾಗತಿಸಿದರು, ಲಿಖಿತ ನಿರೂಪಿಸಿದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts