ಮಾಹಿತಿ

ತಾಲೂಕು ಮಟ್ಟದ ತುಳು ಕತೆ, ಗಾಯನ ಸ್ಪರ್ಧೆ

ಬಂಟ್ವಾಳ ತುಳುಕೂಟವು ಮಕ್ಕಳ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಳು ಕತೆ ಹೇಳುವುದು ಮತ್ತು ತುಳು ಗಾಯನ ಸ್ಪರ್ಧೆ ಆಯೋಜಿಸಿದೆ. ಸ್ಪರ್ಧೆಯು ನವಂಬರ್ 16 ರಂದು ಬೆಳಿಗ್ಗೆ 9.30 ರಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.

ಪ್ರತೀ ಸ್ಪರ್ಧೆಗೆ 5 ನಿಮಿಷಗಳ ಅವಕಾಶವಿದೆ. ಪ್ರತೀ ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಎರಡು ಸಾವಿರ ರೂಪಾಯಿ ನಗದು, ದ್ವಿತೀಯ ಒಂದೂವರೆ ಸಾವಿರ ರೂಪಾಯಿ ನಗದು, ತೃತೀಯ ಒಂದು ಸಾವಿರ ರೂಪಾಯಿ ನಗದು, ಪುಸ್ತಕ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.

ಜಾಹೀರಾತು

ಭಾಗವಹಿಸುವ ವಿದ್ಯಾರ್ಥಿಗಳು ನವಂಬರ್ 5 ತಾರೀಖಿನೊಳಗೆ ತಮ್ಮ ಹೆಸರನ್ನು ಕೆ.ರಮೇಶ ನಾಯಕ್ ರಾಯಿ ಮೊ: 9448252248, ಗೋಪಾಲ ಅಂಚನ್ ಮೊ: 9449104318 ಅವರಲ್ಲಿ ನೊಂದಾಯಿಸಬಹುದಾಗಿದೆ ಎಂದು ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್, ಪ್ರಧಾನ ಕಾರ್ಯದರ್ಶಿ ಎಚ್ಕೆ ನಯನಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.