ವೈವಿಧ್ಯ

ತಾಲೂಕು ಮಟ್ಟದ ತುಳು ಕತೆ, ಗಾಯನ ಸ್ಪರ್ಧೆ

ಬಂಟ್ವಾಳ ತುಳುಕೂಟವು ಮಕ್ಕಳ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಳು ಕತೆ ಹೇಳುವುದು ಮತ್ತು ತುಳು ಗಾಯನ ಸ್ಪರ್ಧೆ ಆಯೋಜಿಸಿದೆ. ಸ್ಪರ್ಧೆಯು ನವಂಬರ್ 16 ರಂದು ಬೆಳಿಗ್ಗೆ 9.30 ರಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.

ಪ್ರತೀ ಸ್ಪರ್ಧೆಗೆ 5 ನಿಮಿಷಗಳ ಅವಕಾಶವಿದೆ. ಪ್ರತೀ ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಎರಡು ಸಾವಿರ ರೂಪಾಯಿ ನಗದು, ದ್ವಿತೀಯ ಒಂದೂವರೆ ಸಾವಿರ ರೂಪಾಯಿ ನಗದು, ತೃತೀಯ ಒಂದು ಸಾವಿರ ರೂಪಾಯಿ ನಗದು, ಪುಸ್ತಕ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.

ಜಾಹೀರಾತು

ಭಾಗವಹಿಸುವ ವಿದ್ಯಾರ್ಥಿಗಳು ನವಂಬರ್ 5 ತಾರೀಖಿನೊಳಗೆ ತಮ್ಮ ಹೆಸರನ್ನು ಕೆ.ರಮೇಶ ನಾಯಕ್ ರಾಯಿ ಮೊ: 9448252248, ಗೋಪಾಲ ಅಂಚನ್ ಮೊ: 9449104318 ಅವರಲ್ಲಿ ನೊಂದಾಯಿಸಬಹುದಾಗಿದೆ ಎಂದು ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್, ಪ್ರಧಾನ ಕಾರ್ಯದರ್ಶಿ ಎಚ್ಕೆ ನಯನಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.