ಬಂಟ್ವಾಳ

ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬಿ.ಸಿ.ರೋಡ್, ಮೇಲ್ಕಾರ್, ಕಲ್ಲಡ್ಕಗಳಲ್ಲಿ ಸ್ವಾಗತ

ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ದಾನಿಗಳಿಂದ ಸಮರ್ಪಣೆಯಾಗಲಿರುವ ಬ್ರಹ್ಮರಥಕ್ಕೆ ಬಿ.ಸಿ.ರೋಡ್, ಮೇಲ್ಕಾರ್, ಕಲ್ಲಡ್ಕಗಳಲ್ಲಿ ಅದ್ದೂರಿಯ ಸ್ವಾಗತ ನಡೆಯಲಿದೆ.

www.bantwalnews.com Editor: Harish Mambady

ಜಾಹೀರಾತು

For Advertisements Contact: 9448548127

ಬಿ.ಸಿ.ರೋಡ್ ಗೆ 10 ಗಂಟೆ: ಅ.1ರಂದು ಬೆಳಗ್ಗೆ ಕೋಟೇಶ್ವರದಿಂದ ಹೊರಡುವ ರಥ ಬಿ.ಸಿ.ರೋಡಿಗೆ ಬೆಳಗ್ಗೆ 10 ಗಂಟೆಗೆ ಆಗಮಿಸುತ್ತದೆ. ಈ ಸಂದರ್ಭ ಬಂಟ್ವಾಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ವತಿಯಿಂದ ಸ್ವಾಗತಿಸಿ ಬೀಳ್ಕೊಡಲಾಗುವುದೆಂದು ಗೌರವಅಧ್ಯಕ್ಷರಾದ ಬಿ. ರಮಾನಾಥ ರೈ ಹಾಗೂ ಅಧ್ಯಕ್ಷರಾದ ಬಿ. ಪದ್ಮಶೇಖರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಬ್ರಹ್ಮರಥಕ್ಕೆ ತುಳುಕೂಟ ವತಿಯಿಂದಲೂ ಅದ್ದೂರಿಯ ಸ್ವಾಗತ ಕೋರಲಾಗುವುದು ಎಂದು ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಕಾರ್ಯದರ್ಶಿ ಎಚ್ಕೆ ನಯನಾಡು ತಿಳಿಸಿದ್ದಾರೆ.

ಜಾಹೀರಾತು

ಮೇಲ್ಕಾರಿಗೆ 11 ಗಂಟೆ: ಅಲ್ಲಿಂದ ಮೇಲ್ಕಾರ್ ಗೆ ಸುಮಾರು 11 ಗಂಟೆಗೆ ತಲುಪಲಿದ್ದು, ಅಲ್ಲಿ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಸಹಿತ ಊರ ಭಕ್ತಾಭಿಮಾನಿಗಳು ಸ್ವಾಗತಿಸಲಿದ್ದಾರೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದ್ದಾರೆ.

ಕಲ್ಲಡ್ಕ ಬಳಿಕ ಕಲ್ಲಡ್ಕದಲ್ಲಿ ಕಲ್ಲಡ್ಕ ಶ್ರೀ ಶಾರದ ಸೇವಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಲ್ಲಡ್ಕ ಕೆಳಗಿನ ಪೇಟೆಯಲ್ಲಿ ಸ್ವಾಗತಿಸಿ ಶ್ರೀ ರಾಮ ಮಂದಿರದ ಎದುರು ಪೂಜೆ ಸಲ್ಲಿಸಿ ಮೇಲಿನ ಪೇಟೆಯಲ್ಲಿ ಬೀಳ್ಕೊಡುವ ಕಾರ್ಯಕ್ರಮ ಇದೆ ಎಂದು ವಜ್ರನಾಥ ಕಲ್ಲಡ್ಕ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ