ಅಲ್ಲಿಪಾದೆಯಲ್ಲಿ ಆಟೊ ಚಾಲಕರಿಗೆ ಸನ್ಮಾನ, ರಸ್ತೆ ಸುರಕ್ಷಾ ಅಭಿಯಾನ

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು

ಅಲ್ಲಿಪಾದೆ ಪರಿಸರ  ಹೆಚ್ಚು ಶಾಂತಿಯುತವಾಗಿದೆ. ಇಲ್ಲಿ ಎಲ್ಲಾ ವರ್ಗದ  ಜನರಿದ್ದರೂ ಸಹಬಾಳ್ವೆ ಹಾಗೂ ನ್ಯಾಯಯುತವಾಗಿ ಬದುಕುತ್ತಿದ್ದಾರೆ. ಆದ್ದರಿಂದ ಇಲ್ಲಿ ಸಂಘರ್ಷಗಳು ಕಡಿಮೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಹೇಳಿದರು.

ಸಂತ ಜೋನರ ಹಿ.ಪ್ರಾ.ಶಾಲೆ ಹಾಗೂ ಸಂತ ಅಂತೋನಿಯವರ ಆಂಗ್ಲ ಮಾಧ್ಯಮ ಶಾಲೆ ಅಲ್ಲಿಪಾದೆ ಆಶ್ರಯದಲ್ಲಿ  ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ,  ರಿಕ್ಷಾ ಚಾಲಕರು ಮತ್ತು ಮಾಲಕರು ಅಲ್ಲಿಪಾದೆ ಇವರ ಸಹಯೋಗದಲ್ಲಿ ಸೋಮವಾರ ನಡೆದ  ರಸ್ತೆ ಸುರಕ್ಷ ಅಭಿಯಾನ ಹಾಗೂ ಹಿರಿಯ ರಿಕ್ಷಾ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಟೋ ಚಾಲಕರು ಪೊಲೀಸರ ಆಪ್ತರು.  ಹೆಚ್ಚಾಗಿ ಪೊಲೀಸರಿಗೆ  ಪ್ರಥಮ ಹಂತದ ಮಾಹಿತಿ ನೀಡುವವರು ಅವರೇ.  ಅವರನ್ನು ಗೌರವದಿಂದ ಕಾಣಬೇಕು ಎಂದರು.  ಆರಟಿಓ ಕಚೇರಿಗಳಲ್ಲಿ ಮಧ್ಯವರ್ತಿ ಗಳನ್ನು ಸಂಪರ್ಕಿಸದೇ ಸ್ವಯಂ ಕೆಲಸ  ಮಾಡುವಂತೆ ಚಾಲಕರಿಗೆ ಅವರು ಸಲಹೆ ನೀಡಿದರು.

ಜಾಹೀರಾತು

ಡೆಂಝಿಲ್ ಹರ್ಮನ್ ನೊರೋನ್ಹ ಸನ್ಮಾನಿತರ ಬಗ್ಗೆ ಮಾತನಾಡಿದರು.

ಅಲ್ಲಿಪಾದೆ ಚರ್ಚ್‌ನ ಧರ್ಮಗುರುಗಳಾದ ವಂ. ಫಾ|  ಫೆಡ್ರಿಕ್ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ  ಮಾನವೀಯತೆ ಮತ್ತು ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡಿದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ. ದೇವರು ಪ್ರತಿಯೊಬ್ಬರಿಗೂ ಒಂದು ಜವಬ್ದಾರಿ ನೀಡಿರುತ್ತಾನೆ,  ಅದನ್ನು ಅರಿತುಕೊಂಡು ಬಾಳ ಬೇಕು ಎಂದು ತಿಳಿಸಿದರು.  ರಸ್ತೆ ಸುರಕ್ಷತೆಯ ಜೊತೆ ಪರಿಸರ ಕಾಪಾಡುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಆಶಿಸಿದರು.  ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಶುಭ ಹಾರೈಸಿದರು.

ಇದೇ ಸಂದರ್ಭ ಸಾರ್ವಜನಿಕರು ಹಾಗೂ ಮಕ್ಕಳಿಗೆ ಸುರಕ್ಷತಾ ದೃಷ್ಡಿಯಿಂದ ನೀಡಲಾದ ಬ್ಯಾರೀಕೇಡ್‌ಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಹಿರಿಯ ರಿಕ್ಷಾ ಚಾಲಕ ಐತಪ್ಪ ಬಂಗೇರ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಕಾರ್ಯದರ್ಶಿ ಶೃತಿ ಮಾಡ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂತ ಜೋನರ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಅಂಜಲೀನಾ, ಸಂತ ಅಂತೋನಿಯವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಲವೀನಾ ವೇಗಸ್, ಪಾಲನ ಸಮಿತಿ ಉಪಾಧ್ಯಕ್ಷ ಲಿಯೋ ಫೆರ್ನಾಂಡೀಸ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಸರಪಾಡಿ ಗ್ರಾ.ಪಂ. ಸದಸ್ಯ ವಿನ್ಸೆಂಟ್ ಪಿಂಟೊ ಸ್ವಾಗತಿಸಿದರು, ಡೆಂಝಿಲ್ ಹರ್ಮನ್ ನೊರೋನ್ಹ ಸನ್ಮಾನಿತರ ಬಗ್ಗೆ ಮಾತನಾಡಿದರು. ಮಿಥುನ್ ಸಿಕ್ವೇರಾ ವಂದಿಸಿದರು. ಕೆವಿನ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಲ್ಲಿಪಾದೆಯಲ್ಲಿ ಆಟೊ ಚಾಲಕರಿಗೆ ಸನ್ಮಾನ, ರಸ್ತೆ ಸುರಕ್ಷಾ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*