ಬಂಟ್ವಾಳ

ಅಲ್ಲಿಪಾದೆಯಲ್ಲಿ ಆಟೊ ಚಾಲಕರಿಗೆ ಸನ್ಮಾನ, ರಸ್ತೆ ಸುರಕ್ಷಾ ಅಭಿಯಾನ

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು

ಅಲ್ಲಿಪಾದೆ ಪರಿಸರ  ಹೆಚ್ಚು ಶಾಂತಿಯುತವಾಗಿದೆ. ಇಲ್ಲಿ ಎಲ್ಲಾ ವರ್ಗದ  ಜನರಿದ್ದರೂ ಸಹಬಾಳ್ವೆ ಹಾಗೂ ನ್ಯಾಯಯುತವಾಗಿ ಬದುಕುತ್ತಿದ್ದಾರೆ. ಆದ್ದರಿಂದ ಇಲ್ಲಿ ಸಂಘರ್ಷಗಳು ಕಡಿಮೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಹೇಳಿದರು.

ಸಂತ ಜೋನರ ಹಿ.ಪ್ರಾ.ಶಾಲೆ ಹಾಗೂ ಸಂತ ಅಂತೋನಿಯವರ ಆಂಗ್ಲ ಮಾಧ್ಯಮ ಶಾಲೆ ಅಲ್ಲಿಪಾದೆ ಆಶ್ರಯದಲ್ಲಿ  ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ,  ರಿಕ್ಷಾ ಚಾಲಕರು ಮತ್ತು ಮಾಲಕರು ಅಲ್ಲಿಪಾದೆ ಇವರ ಸಹಯೋಗದಲ್ಲಿ ಸೋಮವಾರ ನಡೆದ  ರಸ್ತೆ ಸುರಕ್ಷ ಅಭಿಯಾನ ಹಾಗೂ ಹಿರಿಯ ರಿಕ್ಷಾ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಟೋ ಚಾಲಕರು ಪೊಲೀಸರ ಆಪ್ತರು.  ಹೆಚ್ಚಾಗಿ ಪೊಲೀಸರಿಗೆ  ಪ್ರಥಮ ಹಂತದ ಮಾಹಿತಿ ನೀಡುವವರು ಅವರೇ.  ಅವರನ್ನು ಗೌರವದಿಂದ ಕಾಣಬೇಕು ಎಂದರು.  ಆರಟಿಓ ಕಚೇರಿಗಳಲ್ಲಿ ಮಧ್ಯವರ್ತಿ ಗಳನ್ನು ಸಂಪರ್ಕಿಸದೇ ಸ್ವಯಂ ಕೆಲಸ  ಮಾಡುವಂತೆ ಚಾಲಕರಿಗೆ ಅವರು ಸಲಹೆ ನೀಡಿದರು.

ಡೆಂಝಿಲ್ ಹರ್ಮನ್ ನೊರೋನ್ಹ ಸನ್ಮಾನಿತರ ಬಗ್ಗೆ ಮಾತನಾಡಿದರು.

ಅಲ್ಲಿಪಾದೆ ಚರ್ಚ್‌ನ ಧರ್ಮಗುರುಗಳಾದ ವಂ. ಫಾ|  ಫೆಡ್ರಿಕ್ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ  ಮಾನವೀಯತೆ ಮತ್ತು ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡಿದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ. ದೇವರು ಪ್ರತಿಯೊಬ್ಬರಿಗೂ ಒಂದು ಜವಬ್ದಾರಿ ನೀಡಿರುತ್ತಾನೆ,  ಅದನ್ನು ಅರಿತುಕೊಂಡು ಬಾಳ ಬೇಕು ಎಂದು ತಿಳಿಸಿದರು.  ರಸ್ತೆ ಸುರಕ್ಷತೆಯ ಜೊತೆ ಪರಿಸರ ಕಾಪಾಡುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಆಶಿಸಿದರು.  ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಶುಭ ಹಾರೈಸಿದರು.

ಇದೇ ಸಂದರ್ಭ ಸಾರ್ವಜನಿಕರು ಹಾಗೂ ಮಕ್ಕಳಿಗೆ ಸುರಕ್ಷತಾ ದೃಷ್ಡಿಯಿಂದ ನೀಡಲಾದ ಬ್ಯಾರೀಕೇಡ್‌ಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಹಿರಿಯ ರಿಕ್ಷಾ ಚಾಲಕ ಐತಪ್ಪ ಬಂಗೇರ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಕಾರ್ಯದರ್ಶಿ ಶೃತಿ ಮಾಡ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂತ ಜೋನರ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಅಂಜಲೀನಾ, ಸಂತ ಅಂತೋನಿಯವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಲವೀನಾ ವೇಗಸ್, ಪಾಲನ ಸಮಿತಿ ಉಪಾಧ್ಯಕ್ಷ ಲಿಯೋ ಫೆರ್ನಾಂಡೀಸ್ ಮತ್ತಿತರರು ಉಪಸ್ಥಿತರಿದ್ದರು.

ಸರಪಾಡಿ ಗ್ರಾ.ಪಂ. ಸದಸ್ಯ ವಿನ್ಸೆಂಟ್ ಪಿಂಟೊ ಸ್ವಾಗತಿಸಿದರು, ಡೆಂಝಿಲ್ ಹರ್ಮನ್ ನೊರೋನ್ಹ ಸನ್ಮಾನಿತರ ಬಗ್ಗೆ ಮಾತನಾಡಿದರು. ಮಿಥುನ್ ಸಿಕ್ವೇರಾ ವಂದಿಸಿದರು. ಕೆವಿನ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts