ಬಂಟ್ವಾಳಕ್ಕೆ ಪ್ರವೇಶಿಸಿದ ಬ್ರಹ್ಮರಥಕ್ಕೆ ಅದ್ಧೂರಿಯ ಸ್ವಾಗತ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥಕ್ಕೆ ಬಂಟ್ವಾಳ ತುಳುಕೂಟ , ಶ್ರೀರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಬೀಳ್ಕೊಡಲಾಯಿತು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ದೀಪ ಬೆಳಗಿಸಿ ರಥದ ಸ್ವಾಗತಕ್ಕೆ ಚಾಲನೆ ನೀಡಿದರು.ಇದೇ ವೇಳೆ ರಥಕ್ಕೆ ಬೃಹದಾಕಾರದ ಹೂವಿನ ಮಾಲೆಯನ್ನು ಸಮಿರ್ಪಿಸಲಾಯಿತು.ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿಯಿಂದ ರಥ ಆರತಿ ಬೆಳಗಲಾಯಿತು

.ತುಳುಕೂಟದ ವತಿಯಿಂದ ಚೆಂಡೆ,ಪೂರ್ಣಕುಂಭದಿಂದ ಸ್ವಾಗತಿಸಲಾಯಿತು.  ಈ  ಸಂದರ್ಭ ತುಳುಕೂಟದ ಗೌರವಾಧ್ಯಕ್ಷರಾದ  ಎ.ಸಿ, ಭಂಡಾರಿ,ಅಧ್ಯಕ್ಷ ಸುದರ್ಶನ್ ಜೈನ್ ,ಕಾರ್ಯದರ್ಶಿ ಎಚ್.ಕೆ.ನಯನಾಡು ಪದಾಧಿಕಾರಿಗಳಾದ ಸರಪಾಡಿ ಆಶೋಕ ಶೆಟ್ಟಿ,ಮುರಳೀಧರ ಶೆಟ್ಟಿ,ಸೀತಾರಾಮ ಶೆಟ್ಟಿ ಕಾಂತಾಡಿ,ಮಂಜು ವಿಟ್ಲ, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ,ದೇವಪ್ಪ ಕುಲಾಲ್ ಪಂಜಿಕಲ್ಲು,ಸದಾನಂದ ಶೆಟ್ಟಿ,ನಾರಾಯಣ ಸಿ.ಪೆರ್ನೆ, ಸುಕುಮಾರ್ ಕುಲಾಲ್,ಪ್ರವೀಣ.ಬಿ., ಉದ್ಯಮಿ ರಾಕೇಶ್ ಮಲ್ಲಿ ,  ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿಯ ರಾಜೇಶ್ ಎಲ್.ನಾಯಕ್, ಲೋಕನಾಥ ಶೆಟ್ಟಿ,ಬಿ.ಮೋಹನ್,ಸತೀಶ್ ಭಂಡಾರಿ,ರಾಜೇಶ್ ಬಿ.ಸಿ.ರೋಡ್,ಶಿವಶಂಕರ್ ಬಿ.ಸಿ.ರೋಡ್,ನ್ಯಾಯವಾದಿಗಳಾದ ಆಶ್ವನಿಕುಮಾರ್ ರೈ,ಉಮೇಶ್ ,ಪುರಸಭಾ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಪ್ರಮುಖರಾದ ದೇವದಾಸ ಶೆಟ್ಟಿ,ರಾಮದಾಸ್ ಬಂಟ್ವಾಳ,ಚೆನ್ನಪ್ಪ ಆರ್. ಕೋಟ್ಯಾನ್,  ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪುಪ್ಪರಾಜ್ ಚೌಟ,ರಮಾನಾಥ ರಾಯಿ,ಗಣೇಶ್ ರೈ ಮಾಣಿ, ತಾಪಂ ಸದಸ್ಯ ಪ್ರಭಾಕರ ಪ್ರಭು ಮೊದಲಾದವರಿದ್ದರು.

ಕ್ರೆಡಿಟ್ ಕೋ ಅಪ್.ನಿಂದ ಸ್ವಾಗತ: ಇದಕ್ಕು ಮೊದಲು ಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ಬಂಟ್ವಾಳ ಕ್ರೆಡಿಟ್ ಕೋ.ಅಪರೇಟಿವ್  ವತಿಯಿಂದ ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ   ಸ್ವಾಗತಿಸಲಾಯಿತು. ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕೃಷ್ಣ ಮೂರ್ತಿ ಭಟ್, ಮಹೇಶ್ ಕರಿಕಲ, ಬಾಲಕೃಷ್ಣ ಬಲ್ಲೇರಿ, ಅಜೀತ್ ಕುಮಾರ್ ಶೆಟ್ಟಿ,ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ,    ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸದಾಶಿವ ಬಂಗೇರ,ಪುರಸಭಾ ಸದಸ್ಯರಾದ ಜನಾರ್ದನ್ ಚಂಡ್ತಿಮಾರ್, ಲೋಲಾಕ್ಷ ಶೆಟ್ಟಿ, ವಾಸುಪೂಜಾರಿ, ಮಾಯಿಲಪ್ಪ ಸಾಲಿಯಾ, ವಿಜಯ್ ಕುಮಾರ್ ಕೇದಗೆ, , ಕೆಯ್ಯೂರು ನಾರಾಯಣ ಭಟ್, ಸದಾನಂದ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಮುಸ್ಲಿಮರಿಂದ ತಂಪು ಪಾನೀಯ :
ಮಧ್ಯಾಹ್ನ ೧೨ಗಂಟೆಗೆ ಬಿ.ಸಿ.ರೋಡಿನ ಕೈಕಂಬಕ್ಕೆ ತಲುಪಿದಾಗ ಇಲ್ಲಿನ ಮುಸ್ಲಿಂ ಬಾಂಧವರು ರಥವನ್ನು ಸ್ವಾಗತಿಸಿದಲ್ಲದೆ, ಮೆರವಣಿಗೆಯಲ್ಲಿ ಬಂದ ಎಲ್ಲರಿಗೂ ತಂಪು ಪಾನೀಯ ಹಾಗೂ ಲಡ್ಡು ವಿತರಿಸುವ ಮೂಲಕ ಸೌಹಾರ್ದ ಮೆರೆದರು. ಈ ಸಂದರ್ಭದಲ್ಲಿ ಲುಕ್ಮನ್, ಶಮೀರ್, ಚಿತ್ತರಂಜನ್ ಶೆಟ್ಟಿ ಹಾಜರಿದ್ದರು. ಬಿ.ಸಿ.ರೋಡ್ ನಿಂದ  ಮೆಲ್ಕಾರ್ ವರೆಗೆ     ಶ್ರೀ ಶಾರದಾ ಚೆಂಡೆ ಬಳಗದ ಸಂಚಾಲಕ ಮೋಹನ್ ದಾಸ್ ಕೊಟ್ಟಾರಿಯವರ ನೇತೃತ್ವದಲ್ಲಿ ಚೆಂಡೆ,ಬಣ್ಣದ ಕೊಡೆಗಳ ಸಾಲು ಗ್ರಾಮಾಭಿವ್ರದ್ದಿ ಯೋಜನೆಯ ಸದಸ್ಯಯರು ಪೂರ್ಣಕುಂಭ ಸ್ವಾಗತ ಮೆರವಣಿಗೆ ವಿಶೇಷ ಮೆರಗು ನೀಡಿತು. ಬಿ.ಸಿ.ರೋಡ್ ವೃತ್ತದಲ್ಲಿ ಬಂಟ್ವಾಳ ತಾಲೂಕು ವಿಶ್ವಕರ್ಮಸಮಾಜದ ಬಂಧುಗಳು ಸ್ವಾಗತಿಸಿ ಬೀಳ್ಕೊಟ್ಟರು.,

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳಕ್ಕೆ ಪ್ರವೇಶಿಸಿದ ಬ್ರಹ್ಮರಥಕ್ಕೆ ಅದ್ಧೂರಿಯ ಸ್ವಾಗತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*