ಬಂಟ್ವಾಳ

ಅಹಿಂಸಾ ಸಿದ್ಧಾಂತ ಪ್ರತಿಪಾದನೆಯಿಂದ ಪ್ರಸಿದ್ಧರಾದರು ಗಾಂಧೀಜಿ: ನ್ಯಾಯಾಧೀಶ

ಗಾಂಧೀಜಿ ಸರಳತೆಯ ಪ್ರತೀಕವಾಗಿದ್ದರು, ನಾಯಕತ್ವ ಗುಣ, ಅಹಿಂಸಾ ಸಿದ್ಧಾಂತದ ಪ್ರತಿಪಾದನೆಯಿಂದ ವಿಶ್ವ ಪ್ರಸಿದ್ಧರಾದರು ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ ಸಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಮಹಮ್ಮದ್ ಇಮ್ತಿಯಾಜ್ ಅಹಮದ್ ಹೇಳಿದರು.

ಜಾಹೀರಾತು

ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ 150ನೇ ಗಾಂಧಿ ಜಯಂತಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಹಾಗು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ರಮ್ಯ ಎಚ್.ಆರ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಶಿಲ್ಪಾ ಜಿ. ತಿಮ್ಮಾಪುರ ಶುಭ ಹಾರೈಸಿದರು.  ಬೊಂಡಾಲ ಜಗನ್ನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕು ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ ಜೈನ್, ಮಾಜಿ ಅಧ್ಯಕ್ಷ ಶ್ರೀಧರ ಪೈ, ಶಿಕ್ಷಕರಾದ ಸುಜಾತ, ಸದಾಶಿವ ನಾಯಕ್, ವಸಂತಿ, ಪ್ರಕಾಶ್, ಹರೀಶ್, ವರಮಹಾಲಕ್ಷ್ಮೀ, ಶಾಲಾ ವಿದ್ಯಾರ್ಥಿ ನಾಯಕ ರಿತೇಶ್ ಪೋಷಕರು ಉಪಸ್ಥಿತರಿದ್ದರು. ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ನ್ಯಾಯಾಧೀಶರು ಬಹುಮಾನ ವಿತರಿಸಿದರು.

ಜಾಹೀರಾತು

ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ