ನವರಾತ್ರಿ ಉತ್ಸವದ ಅಂಗವಾಗಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ರಶ್ಮಿ ಎಸ್ ಆರ್ ನೇತೃತ್ವದಲ್ಲಿ ಆಯುಧಪೂಜಾ ಕಾರ್ಯಕ್ರಮ ನಡೆಯಿತು.
ಅರ್ಚಕ ರಾಘವೇಂದ್ರ ಮಯ್ಯರಬೈಲು ಪೂಜಾ ವಿಧಿ ವಿಧಾನ ಕಾರ್ಯಕ್ರಮ ನೆರವೇರಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್. ವಿಟ್ಲ ನಾಡಕಚೇರಿ ಉಪತಹಸೀಲ್ದಾರ್ ರವಿಶಂಕರ್ ಸಿ ಎಮ್, ಪ್ರಭಾರ ಉಪತಹಸೀಲ್ದಾರ್ ಸೀತಾರಾಮ. ಗ್ರೆಟ್ಟಾ ಮಸ್ಕರೇಂಞಸ್, ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು. ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…