ರಾಜ್ಯಮಟ್ಟದ ಮುಕ್ತ ಯೋಗ ಸ್ಪರ್ಧೆ ಸಮಾರೋಪ

ಭಾನುವಾರ ಸಂಜೆ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ (ರಿ) ಮಂಗಳೂರು ಬಂಟ್ವಾಳ ಘಟಕ ವತಿಯಿಂದ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.

ಜಾಹೀರಾತು

ಸಮಾರೋಪ ಭಾಷಣ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಯೋಗಕ್ಕೆ ಪ್ರೇರಣೆ ನೀಡುವ ಶಕ್ತಿ ಈಗ ನಿರ್ಮಾಣವಾಗುತ್ತಿದ್ದು, ಸ್ಪರ್ಧೆಯಿಂದ ಪ್ರತಿಭೆಗಳನ್ನು ಬೆಳೆಸಿದಂತಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಬಹುಮಾನ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಮಾತನಾಡಿ, ಯೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಇಂದು ದೂರವಾಗಿದ್ದು, ಜನಸಾಮಾನ್ಯನೂ ಇದರ ಬಗ್ಗೆ ಕುತೂಹಲ ಮೂಡಿಸುವಂತೆ ಮಾಡಲಾಗುವ ಪ್ರಕ್ರಿಯೆಗಳು ಇಂದು ನಡೆಯುತ್ತಿರುವುದು ಸಂತೋಷದಾಯಕ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ,ಲಯನ್ಸ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ರಾಮನಗರ ನ್ಯಾಯಾಧೀಶೆ ಕಲ್ಪನಾ ಚಂದ್ರಶೇಖರ್, ಉದ್ಯಮಿಗಳಾದ ಸಂಜೀವ ಪೂಜಾರಿ ಗುರುಕೃಪಾ, ಭಾಸ್ಕರ ಶೆಟ್ಟಿ ಪುಣೆ, ಲೋಕನಾಥ ಶೆಟ್ಟಿ, ಶ್ರೀ ರಕ್ತೇಶ್ವರಿ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಎಲ್. ನಾಯಕ್, ಆಯುಷ್ ಜಿಲ್ಲಾಧ್ಯಕ್ಷ ಮಹಮ್ಮದ್ ಇಕ್ಬಾಲ್, ಯೋಗನಿಧಿ ಪತಂಜಲಿ ಪ್ರತಿಷ್ಠಾನ ಅಧ್ಯಕ್ಷ ಡಾ. ಶಿವಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಯೋಗಗುರು ಡಾ. ರಘುವೀರ ಅವಧಾನಿ, ಯೋಗಗುರು ಮೋನಪ್ಪ ಪೂಜಾರಿ, ಪ್ರತಿಷ್ಠಾನ ಗೌರವಾಧ್ಯಕ್ಷ ಸೇಸಪ್ಪ ಕೋಟ್ಯಾನ್, ಕೋಶಾಧಿಕಾರಿ ಡಾ. ಸುಬ್ರಹ್ಮಣ್ಯ ಟಿ, ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಸಾದ್ ಕುಮಾರ್, ಪ್ರತಿಭಾ ರೈ ಉಪಸ್ಥಿತರಿದ್ದರು. ಸುನೀತಾ, ಪ್ರತಿಭಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿದರು.

ಜಾಹೀರಾತು

ದಾಮೋದರ ರಾಮಕುಂಜ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಕಾರ್ಯಕ್ರಮದ ಪೋಷಕರನ್ನು ಸಂಘಟಕರನ್ನು, ತೀರ್ಪುಗಾರರನ್ನು, ಸ್ವಯಂ ಸೇವಕರನ್ನು ಸನ್ಮಾನಿಸಲಾಯಿತು. 8 ವಿಭಾಗಗಳ ಮಹಿಳೆ ಮತ್ತು ಪುರುಷರಿಗೆ ಸ್ಪರ್ಧೆಗಳು ನಡೆದಿದ್ದು, ಬಹುಮಾನ ವಿತರಿಸಲಾಯಿತು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯಮಟ್ಟದ ಮುಕ್ತ ಯೋಗ ಸ್ಪರ್ಧೆ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*