ಬಂಟ್ವಾಳ

ರಾಜ್ಯಮಟ್ಟದ ಮುಕ್ತ ಯೋಗ ಸ್ಪರ್ಧೆ ಸಮಾರೋಪ

ಭಾನುವಾರ ಸಂಜೆ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ (ರಿ) ಮಂಗಳೂರು ಬಂಟ್ವಾಳ ಘಟಕ ವತಿಯಿಂದ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.

ಜಾಹೀರಾತು

ಸಮಾರೋಪ ಭಾಷಣ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಯೋಗಕ್ಕೆ ಪ್ರೇರಣೆ ನೀಡುವ ಶಕ್ತಿ ಈಗ ನಿರ್ಮಾಣವಾಗುತ್ತಿದ್ದು, ಸ್ಪರ್ಧೆಯಿಂದ ಪ್ರತಿಭೆಗಳನ್ನು ಬೆಳೆಸಿದಂತಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಬಹುಮಾನ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಮಾತನಾಡಿ, ಯೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಇಂದು ದೂರವಾಗಿದ್ದು, ಜನಸಾಮಾನ್ಯನೂ ಇದರ ಬಗ್ಗೆ ಕುತೂಹಲ ಮೂಡಿಸುವಂತೆ ಮಾಡಲಾಗುವ ಪ್ರಕ್ರಿಯೆಗಳು ಇಂದು ನಡೆಯುತ್ತಿರುವುದು ಸಂತೋಷದಾಯಕ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ,ಲಯನ್ಸ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ರಾಮನಗರ ನ್ಯಾಯಾಧೀಶೆ ಕಲ್ಪನಾ ಚಂದ್ರಶೇಖರ್, ಉದ್ಯಮಿಗಳಾದ ಸಂಜೀವ ಪೂಜಾರಿ ಗುರುಕೃಪಾ, ಭಾಸ್ಕರ ಶೆಟ್ಟಿ ಪುಣೆ, ಲೋಕನಾಥ ಶೆಟ್ಟಿ, ಶ್ರೀ ರಕ್ತೇಶ್ವರಿ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಎಲ್. ನಾಯಕ್, ಆಯುಷ್ ಜಿಲ್ಲಾಧ್ಯಕ್ಷ ಮಹಮ್ಮದ್ ಇಕ್ಬಾಲ್, ಯೋಗನಿಧಿ ಪತಂಜಲಿ ಪ್ರತಿಷ್ಠಾನ ಅಧ್ಯಕ್ಷ ಡಾ. ಶಿವಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಯೋಗಗುರು ಡಾ. ರಘುವೀರ ಅವಧಾನಿ, ಯೋಗಗುರು ಮೋನಪ್ಪ ಪೂಜಾರಿ, ಪ್ರತಿಷ್ಠಾನ ಗೌರವಾಧ್ಯಕ್ಷ ಸೇಸಪ್ಪ ಕೋಟ್ಯಾನ್, ಕೋಶಾಧಿಕಾರಿ ಡಾ. ಸುಬ್ರಹ್ಮಣ್ಯ ಟಿ, ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಸಾದ್ ಕುಮಾರ್, ಪ್ರತಿಭಾ ರೈ ಉಪಸ್ಥಿತರಿದ್ದರು. ಸುನೀತಾ, ಪ್ರತಿಭಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿದರು.

ದಾಮೋದರ ರಾಮಕುಂಜ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಕಾರ್ಯಕ್ರಮದ ಪೋಷಕರನ್ನು ಸಂಘಟಕರನ್ನು, ತೀರ್ಪುಗಾರರನ್ನು, ಸ್ವಯಂ ಸೇವಕರನ್ನು ಸನ್ಮಾನಿಸಲಾಯಿತು. 8 ವಿಭಾಗಗಳ ಮಹಿಳೆ ಮತ್ತು ಪುರುಷರಿಗೆ ಸ್ಪರ್ಧೆಗಳು ನಡೆದಿದ್ದು, ಬಹುಮಾನ ವಿತರಿಸಲಾಯಿತು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts