ಬಂಟ್ವಾಳ

ಮೌಖಿಕ ಇತಿಹಾಸ ದಾಖಲೀಕರಣದಲ್ಲಿ ಸತ್ಯಾನ್ವೇಷಣೆ: ಪ್ರೊ. ತುಕಾರಾಮ ಪೂಜಾರಿ

www.bantwalnews.com Editor: Harish Mambady For Advertisements Contact: 9448548127

ಇತಿಹಾಸ ಎಂಬುದು ಅರ್ಧ ಸತ್ಯ. ಇದರಲ್ಲಿ ಸತ್ಯದ ಹುಡುಕಾಟ ನಡೆಯಬೇಕು. ಮೌಖಿಕ ಇತಿಹಾಸದ ದಾಖಲೀಕರಣ ಸಂದರ್ಭ ಸತ್ಯಾನ್ವೇಷಣೆಯೂ ನಡೆಯುತ್ತದೆ, ಜನಸಾಮಾನ್ಯರ ನೆಲೆಗಟ್ಟಿನ ವಿಶ್ಲೇಷಣೆಯೂ ದೊರೆಯುತ್ತದೆ ಎಂದು ಬಿ.ಸಿ.ರೋಡ್ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಹೇಳಿದರು.

ಜಾಹೀರಾತು

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ವಸ್ತುಸಂಗ್ರಹಾಲಯದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ  ಶನಿವಾರ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ನಡೆದ ಮೌಖಿಕ ಇತಿಹಾಸ ದಾಖಲೀಕರಣ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರಿನ ದೈಜಿವರ್ಲ್ಡ್ ವ್ಯವಸ್ಥಾಪಕ  ಪ್ರವೀಣ್ ತಾವ್ರೋ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿ, ಜನಸಾಮಾನ್ಯರ ಪರಿಕಲ್ಪನೆಯಡಿ ಇತಿಹಾಸ ದರ್ಶನ ನಡೆಸುವ ಕಾರ್ಯ ಶ್ಲಾಘನೀಯ ಎಂದರು.

ಮಡಿಕೇರಿ ಭೂಮಾಪನ ಅಳತೆ ವಿಭಾಗದ ಅಧಿಕಾರಿ ಗಜೇಂದ್ರ ಮಾತನಾಡಿ, ಪ್ರವಾಸೋದ್ಯಮ ಹಿನ್ನೆಲೆಯಲ್ಲಿ, ತುಳುನಾಡಿನ ಇತಿಹಾಸ ಪರಂಪರೆ ಅರಿವು ಮೂಡಿಸುವ ಕಾರ್ಯ ಹಿನ್ನಡೆಯಾಗುತ್ತಿದೆ. ಮಕ್ಕಳಿಗೆ, ಜನರಿಗೆ ತಲುಪಿಸುವ ಕಾರ್ಯ ನಡೆಯಬೇಕು. ಜನರನ್ನು ಇತಿಹಾಸದತ್ತ ಆಕರ್ಷಿಸುವ ಕಾರ್ಯ ನಡೆಯಬೇಕು ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ, ಮಾಹಿತಿ ನೀಡುವ ಕಾರಗಯ ನಡೆಯಬೇಕು. ಇಂಥ ಜಾಗಗಳ ಪರಿಚಯ ಮಾಡಬೇಕು, ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಇದನ್ನು ಅಭಿವೃದ್ಧಿ ಪಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಯುಎಇ ಕನ್ನಡ ಸಂಸ್ಕೃತಿ ರಾಯಭಾರಿ ಸರ್ವೋತ್ತಮ ಶೆಟ್ಟಿ, ಉಡುಪಿ ಜಿಲ್ಲೆಯ ಇತಿಹಾಸ ಉಪನ್ಯಾಸ ಸಂಘದ ಕಾರ್ಯದರ್ಶಿ ಮರಿಯಾ ಜಸಿಂತಾ ಫುರ್ಟಾಡೋ, ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸ ಸಂಘದ ಕಾರ್ಯದರ್ಶಿ ಪ್ರೊ.ಸಂತೋಷ್, ಕಾಸರಗೋಡು ಇತಿಹಾಸ ಉಪನ್ಯಾಸಕ ವೇದಿಕೆ ಸಂಚಾಲಕ ಪ್ರೊ.ರಾಜೇಂದ್ರ ರೈ, ಕೇಂದ್ರದ ಪ್ರೊ.ಆಶಾಲತಾ ಸುವರ್ಣ ಉಪಸ್ಥಿತರಿದ್ದರು. ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.  ಸರಕಾರಿ ಕಾಲೇಜು ಪ್ರಭಾರ ಪ್ರಾಂಶುಪಾಲ ಪ್ರೊ. ವಿಲ್ಫ್ರೆಡ್ ಪ್ರಕಾಶ್  ಡಿಸೋಜ ಸ್ವಾಗತಿಸಿದರು. ಸಚೇತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಶರತ್ ಆಳ್ವ ಪ್ರಾರ್ಥಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.