ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ 70 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜ್ಞಾನಮಂದಿರವೆಂಬ ಸಮುದಾಯ ಭವನದ ವಿಜ್ಞಾಪನ ಪತ್ರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಟ್ರಸ್ಟಿಗಳಾದ ಎಸ್.ಗಂಗಾಧರ ಭಟ್ ಕೊಳಕೆ, ಕೆ.ಮೋಹನದಾಸ ಪೂಜಾರಿ ಬೊಳ್ಳಾಯಿ, ರಮಾ ಎಸ್.ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)