ಸಿನಿಮಾ

ಸವರ್ಣ ದೀರ್ಘ ಸಂಧಿ – 18ರಂದು ತೆರೆಗೆ

ವೀರು ಟಾಕೀಸ್ ಮತ್ತು ಲೈಲಾಕ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಸವರ್ಣದೀರ್ಘ ಸಂಧಿ ಸಿನಿಮಾವು ಇದೇ ಅಕ್ಟೋಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಜಾಹೀರಾತು

ತುಳು ಸಿನಿಮಾ ’ಚಾಲಿಪೋಲಿಲು’ ಖ್ಯಾತಿಯ ನಿರ್ದೇಶಕ ವೀರೇಂದ್ರ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಈ ಸಿನಿಮಾದಲ್ಲಿ ಹಿರಿಯ ನಟಿ ವಿನಯಪ್ರಸಾದ್ ಅವರ ಸಹೋದರನ ಮಗಳಾದ ಕೃಷ್ಣಾ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಲುಷಿಂಗ್ಟನ್ ಥಾಮಸ್, ಹೇಮಂತ್ ಕುಮಾರ್ (ಪಿವಿಆರ್), ಮನೋಮೂರ್ತಿ, ವೀರೇಂದ್ರ ಶೆಟ್ಟಿ ಸೇರಿದಂತೆ ನಾಲ್ಕು ಜನ ನಿರ್ಮಾಪಕರನ್ನು ಹೊಂದಿರುವ ಈ ಸಿನಿಮಾಗೆ ಮನೋಮೂರ್ತಿ ಸಂಗೀತವಿದೆ. ಶಂಕರ್ ಮಹದೇವನ್, ಶ್ರೇಯಾ ಘೋಷಾಲ್ , ಶಶಿಕಲಾ ಸುನೀಲ್, ವಿಧಿಷಾ ವಿಶ್ವಾಸ್ ಹಿನ್ನೆಲೆ ಗಾಯನ ಈ ಚಿತ್ರಕ್ಕಿದೆ.

ಜಾಹೀರಾತು

ಉಸ್ತಾದ್ ಹೋಟೆಲ್ ಖ್ಯಾತಿಯ ಛಾಯಾಗ್ರಾಹಕ ಲೋಗನಾಥನ್ ಶ್ರೀನಿವಾಸನ್ ಕ್ಯಾಮಾರ ಈ ಸಿನಿಮಾಕ್ಕಿದೆ. ಸಂಕೇತ್ ಶಿವಪ್ಪ ಸಂಕಲನ ಮಾಡಿದ್ದಾರೆ. ಆನೇಕಲ್, ಜಿಗಣಿ, ದೇವರಾಯನ ದುರ್ಗಾ, ಮೂಡಿಗೆರೆ, ಮತ್ತು ಬೆಂಗಳೂರು ಆಸುಪಾಸು ಚಿತ್ರೀಕರಣ ನಡೆದಿದೆ.

ಜಾಹೀರಾತು

ವೀರೇಂದ್ರ ಶೆಟ್ಟಿ, ಕೃಷ್ಣಾ, ರವಿಭಟ್, ಕೃಷ್ಣ ನಾಡಿಗ್, ಪದ್ಮಜ ಸುರೇಂದ್ರ ಬಂಟ್ವಾಳ, ನಿರಂಜನ್ ದೇಶಪಾಂಡೆ, ರವಿ ಮಂಡ್ಯ, ಅಜಿತ್ ಹನಮಕ್ಕನವರ್ , ಅಲ್ವಿನ್ ಸಚಿನ್ ಡಿಸೋಜ, ಅವಿನಾಶ್ ನೀನಾಸಂ, ದತ್ತಾತ್ರೇಯ ಕುರಹಟ್ಟಿ, ರಾಮರಾವ್, ಸಂಕೇತ್ ಶಿವಪ್ಪ, ಪ್ರಣವ್ ಮೂರ್ತಿ, ಅಪ್ರಮೆಯ, ರಾಘು ಕಲಾವಿದ, ವಿಕ್ಕಿ, ಮಧುಸೂದನ್, ಮಧು ಭಾರದ್ವಾಜ್, ಎಲಿಜಬೆತ್ ಥಾಮಸ್ ಮುಂತಾದವರು ತಾರಾಗಣದಲ್ಲಿದ್ದಾರೆ. ನಿರ್ದೇಶನ-ಕಥೆ-ಚಿತ್ರಕಥೆ-ಸಂಭಾಷಣೆ: ವೀರೇಂದ್ರ ಶೆಟ್ಟಿ ಕಾವೂರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ