ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಸಂಕಷ್ಟಗಳ ವಿರುದ್ಧ ಸಿಪಿಐ ಹಾಗೂ ಸಿಪಿಐಎಂ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನೆ ಮಂಗಳವಾರ ಬಿ.ಸಿ.ರೋಡ್ ಜಂಕ್ಷನ್ನಲ್ಲಿ ನಡೆಯಿತು.
www.bantwalnews.com Editor: Harish Mambady For Advertisements Contact: 9448548127
ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ದೊಡ್ಡ ಪ್ರಮಾಣದ ಕೈಗಾರಿಕೆಯಿಂದ ಹಿಡಿದು ಸಣ್ಣಗುಡಿ ಕೈಗಾರಿಕೆಗಳು ಕೂಡಾ ಮುಚ್ಚಿ ಹೋಗುತ್ತಿವೆ ಎಂದರು.
ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಆರ್ಎಸ್ಪಿ ಎಡಪಕ್ಷಗಳ ವತಿಯಿಂದ ದೇಶಾದ್ಯಂತ ಪ್ರತಿಭಟನಾ ಸಭೆಗಳು ನಡೆಯುತಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಪ್ರಮುಖರಾದ ಉದಯ ಕುಮಾರ್, ಸಂಜೀವ ಬಂಗೇರ, ವಾಸುಗಟ್ಟಿ, ಬಾಬು ಭಂಡಾರಿ, ಭಾರತಿ ಶಂಭೂರು, ಸರಸ್ವತಿ ಕಡೇಶಿವಾಲಯ, ಪಿ.ವಿಠಲ ಬಂಗೇರ, ಸುಧಾಕರ ಹಾಜರಿದ್ದರು. ಸಿಪಿಐ(ಎಂ) ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ ವಂದಿಸಿದರು. ಮುಖಂಡ ಸುರೇಶ್ ಕುಮಾರ್ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…