ಬಂಟ್ವಾಳ

ಆರ್ಥಿಕ ಬಿಕ್ಕಟ್ಟು: ಬಿ.ಸಿ.ರೋಡಿನಲ್ಲಿ ಎಡಪಕ್ಷಗಳ ಪ್ರತಿಭಟನೆ

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಸಂಕಷ್ಟಗಳ ವಿರುದ್ಧ ಸಿಪಿಐ ಹಾಗೂ ಸಿಪಿಐಎಂ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನೆ ಮಂಗಳವಾರ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ನಡೆಯಿತು.

ಜಾಹೀರಾತು

www.bantwalnews.com Editor: Harish Mambady For Advertisements Contact: 9448548127

ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ದೊಡ್ಡ ಪ್ರಮಾಣದ ಕೈಗಾರಿಕೆಯಿಂದ ಹಿಡಿದು ಸಣ್ಣಗುಡಿ ಕೈಗಾರಿಕೆಗಳು ಕೂಡಾ ಮುಚ್ಚಿ ಹೋಗುತ್ತಿವೆ ಎಂದರು.

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಆರ್‌ಎಸ್‌ಪಿ ಎಡಪಕ್ಷಗಳ ವತಿಯಿಂದ ದೇಶಾದ್ಯಂತ ಪ್ರತಿಭಟನಾ ಸಭೆಗಳು ನಡೆಯುತಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಪ್ರಮುಖರಾದ ಉದಯ ಕುಮಾರ್, ಸಂಜೀವ ಬಂಗೇರ, ವಾಸುಗಟ್ಟಿ, ಬಾಬು ಭಂಡಾರಿ, ಭಾರತಿ ಶಂಭೂರು, ಸರಸ್ವತಿ ಕಡೇಶಿವಾಲಯ, ಪಿ.ವಿಠಲ ಬಂಗೇರ, ಸುಧಾಕರ ಹಾಜರಿದ್ದರು. ಸಿಪಿಐ(ಎಂ) ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ ವಂದಿಸಿದರು. ಮುಖಂಡ ಸುರೇಶ್ ಕುಮಾರ್ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ