ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಕೆಲಸ ಮಾಡಿ: ರಮಾನಾಥ ರೈ

ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

ಬಂಟ್ವಾಳ ಕ್ಷೇತ್ರದ ಕುಕ್ಕಿಪ್ಪಾಡಿ ಗ್ರಾಪಂನಲ್ಲಿ ಕಾಂಗ್ರೆಸ್ ಮಿಲನ ಮಾಡಮೆ ಮಿನೇಜಸ್ ನಿವಾಸದಲ್ಲಿ ನಡೆದಿದ್ದು, ಮಾತನಾಡಿದ ಅವರು, ಕಾರ್ಯಕರ್ತರು ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಟ್ಟು ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕಾಗಿದೆ ಮುಂಬರುವ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರ ವಿಜಯಕ್ಕೆ ಹಿರಿಯರು ಹಾಗೂ ಯುವ ಜನಾಂಗ ಒಟ್ಟಾಗಿ ಶ್ರಮಿಸೋಣ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ವಲಯ ಕಾಂಗ್ರೆಸ್ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರಿಂದ ಸಲಹೆ ಸೂಚನೆಯನ್ನು ಪಡೆದು ಕಾರ್ಯರೂಪಿಸುವುದಾಗಿ ತಿಳಿಸಿದರು. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಆದ ಸೋಲಿನ ಬಗ್ಗೆ ಪರಾಮವರ್ಶಿಸಿದರು. ಕಾರ್ಯಕರ್ತರ ಕಷ್ಟ  ಸುಃಖವನ್ನು ಅರಿತುಕೊಂಡು  ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು.

ಕುಕ್ಕಿಪಾಡಿ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸುರೇಶ್ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು ಬೂತ್ ಸಮಿತಿ ಅಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ, ಸೀತಾರಾಮ್ ಶಾಂತಿ, ಸುಧೀಂದ್ರ ಶೆಟ್ಟಿ, ಉಮೇಶ್ ಶೆಟ್ಟಿ ಕೊನೆರೊಟ್ಟು ಮತ್ತು ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಧೀಪ್ ಹಲಾಯಿ ಹಾಗೂ  ಮಹಿಳಾ ಅಧ್ಯಕ್ಷರಾಗಿ ಪ್ರೇಮಲ್ ಬಾಂಚ್ಲ್ ಡಿಸೋಜ ಇವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಮುಖಂಡರಾದ  ಜಗದೀಶ್ ಕೊಯಿಲ, ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ದಿನೇಶ್ ಸುಂದರ್ ಶಾಂತಿ ಸ್ವಾಗತಿಸಿ ಕುಕ್ಕಿಪಾಡಿ ತಿಮ್ಮಪ್ಪ ಪೂಜಾರಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಕೆಲಸ ಮಾಡಿ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*