ಜಿಲ್ಲಾ ಸುದ್ದಿ

ತೆರಿಗೆ ಪಾವತಿಸದ ಮೊಬೈಲ್ ಟವರ್: ನೋಟಿಸ್ ಜಾರಿಗೊಳಿಸಿ – ಸಚಿವ ಕೋಟ

ಮಂಗಳೂರು:  ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ  ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು  ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು

ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ  ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ: ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆ ಮಾಡುವ ಸಂದರ್ಭದಲ್ಲಿ  ನಿಯಾಮಾನುಸಾರವಾಗಿ ಸರಕಾರದ ಮಾನದಂಡದ ಮೂಲಕ ಆಯ್ಕೆ ಮಾಡಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀರಿಕ್ಷೆ ಇದ್ದವರಿಗೆ ಅಲ್ಲಿ ಪ್ರಶಸ್ತಿ ಸಿಗದೆ ಇದ್ದಾಗ ಜಿಲ್ಲಾ ಮಟ್ಟದಲ್ಲಿ ನೀಡೋದು ಸಮಾಧಾನಕರವಾಗಿರುತ್ತದೆ ಎಂದ ಸಚಿವ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಂದಿರುವಂತಹ ಅರ್ಜಿಗಳ ಮಾಹಿತಿ ಪಡೆದರು.ಎಲ್ಲಾ ಕ್ಷೇತ್ರಗಳಿಗೆ ಹಂಚಿಕೆಯಾಗುವಂತೆ ಕನಿಷ್ಠ 25 ಪ್ರಶಸ್ತಿಗಳನ್ನು ನೀಡಬೇಕು ಎಂದು ತಿಳಿಸಿದರು.

 ಅಬ್ಬಕ್ಕ ಉತ್ಸವ: ಜಿಲ್ಲಾಡಳಿತದ ಮೂಲಕ ನಡೆಯುವಂತಹ ಪ್ರತಿ ಉತ್ಸವಗಳಿಗೆ ಸಂಬಧಪಟ್ಟ ಸಮಿತಿಗಳು ತಮ್ಮ ಸಲಹೆಗಳನ್ನು ನೀಡಬಹುದು, ಆದುದರಿಂದ ಅಬ್ಬಕ್ಕ ಉತ್ಸವಕ್ಕೆ ಸಂಬಂಧಿಸಿದ ಎರಡು ಸಮಿತಿಗಳನ್ನು ಸೇರಿಸಿ ಸಭೆ ನಡೆಸುವ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದು ಸರಕಾರದ ನಿಯಮದ ಪ್ರಕಾರ ಉತ್ಸವ ನಡೆಸುವುದು ಸೂಕ್ತವಾದೆ. ಕರಾವಳಿ ಉತ್ಸವದ ಹಿಂದಿನ ವರ್ಷದ ಮಾದರಿಯನ್ನು ಸರಕಾರಕ್ಕೆ ನೀಡಿ ಅದರಂತೆ ಪ್ರಸ್ತುತ ಕರಾವಳಿ ಉತ್ಸವ ನಡೆಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಪಿಲಿಕುಳದಲ್ಲಿ ಕಂಬಳ: ಪಿಲಿಕುಳದಲ್ಲಿ  ಜಿಲ್ಲೆಯ ಜಾನಪದ ಕಲೆಯಾದ ಕಂಬಳವನ್ನು ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲ್ಲಿ ನಡೆಸಬಹುದಾಗಿದೆ. ಇದಕ್ಕೆ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕಂಬಳಕ್ಕೆ ಬೇಕಾಗುವ ಅನುದಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಅನುದಾನದ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ನೀಡಿ, ಆದಷ್ಟು ಬೇಗ ಮಂಜೂರು ಮಾಡಿಸುವಂತೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.