ಭಾರೀ ಮಳೆ ಸುರಿಯುತ್ತಿರುವಾಗ ರೈಲ್ವೆ ಹಳಿ ದಾಟುತ್ತಿದ್ದ ಇಬ್ಬರು ಯುವಕರಿಗೆ ರೈಲು ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಮತ್ತೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಯುವಕರು ಕೂಲಿ ಕೆಲಸ ಮುಗಿಸಿ ಹಿಂದಿರುಗುವಾಗ ಸಂಜೆ ಸುರಿದ ಭಾರೀ ಮಳೆ ಗುಡುಗು, ಮಿಂಚಿಗೆ ಗಾಬರಿಯಾಗಿ ಹಳಿದಾಟುತ್ತಿದ್ದಾಗ ಘಟನೆ ನಡೆದಿದೆ.
ತೊಕ್ಕೊಟ್ಟಿನಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಸುಭಾಷ್(24) ಸಾವನ್ನಪ್ಪಿದ್ದು ಮಂಜುನಾಥ್(26) ಕಾಲು ಮುರಿತಕ್ಜೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಭಾಷ್ ಹಾಗೂ ಮಂಜುನಾಥ್ ಹಾವೇರಿ ಜಿಲ್ಲೆಯವರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೈಲು ಡಿಕ್ಕಿ ಒಬ್ಬ ಸಾವು, ಇನ್ನೊಬ್ಬ ಗಂಭೀರ"