ಬಂಟ್ವಾಳ

ಇರಾ ಸೂತ್ರಬೈಲಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಬಂಟ್ವಾಳ ತಾಲೂಕಿನ ಮಂಚಿ ಸಮೀಪ ಇರಾ ಸೂತ್ರಬೈಲ್ ಎಂಬಲ್ಲಿ ಕಳ್ಳರು ಮನೆಯೊಂದನ್ನು ಪ್ರವೇಶಿಸಿ ಚಿನ್ನಾಭರಣವನ್ನು ಕದ್ದೊಯ್ದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಜಾಹೀರಾತು

ರಾತ್ರಿ ಸುಮಾರು 3ರಿಂದ 4 ಗಂಟೆ ವೇಳೆ ಸೂತ್ರಬೈಲು ನಿವಾಸಿ ಇಬ್ರಾಹಿಂ ರಿಯಾಜ್ ಅವರ ಮನೆಯ ಕಿಟಕಿ ಮೂಲಕ ಹಿಂಬಾಗಿಲ ಚಿಲಕ ತೆಗೆದು ಮನೆಯೊಳಗೆ ನುಗ್ಗಿದ ಕಳ್ಳರು  ಎರಡು ಪವನ್ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ

ಕಳ್ಳರು ಮನೆಯವರು ಮಲಗಿದ್ದ ಕೋಣೆಯಲ್ಲಿದ್ದ ಕಪಾಟಿನಲ್ಲಿ ಇಟ್ಟಿದ್ದ ಅಂದಾಜು ಎರಡು ಪವನ್ ತೂಕದ ಚಿನ್ನದ ಸರ ಮತ್ತು  ಬ್ರಾಸ್ ಲೈಟ್  ಕದ್ದೊಯ್ಯಲಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಮನೆಯ ಹತ್ತಿರ ಇನ್ನೊಂದು ಮನೆಗೂ ನುಗ್ಗಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದ್ದು, ಸ್ಥಳ ಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಬೇಟಿ ನೀಡಿದ್ದಾರೆ. ಗ್ರಾಮಾಂತರ ಎಸ್.ಐ.ಪ್ರಸನ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.