ಕಡತ ಶೀಘ್ರ ವಿಲೇವಾರಿಗೆ ಗ್ರಾಪಂ ಪ್ರತಿನಿಧಿಗಳ ಒಕ್ಕೂಟ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಬೇಡಿಕೆಗಳಿಗೆ ಸಲ್ಲಿಸಿರುವ ಜಮೀನು ಕಾದಿರುಸುವಿಕೆ ಜಮೀನಿನ ಕಡತಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಕಂದಾಯ ಸಚಿವ ಆರ್.ಆಶೋಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಈಗಾಗಲೇ ಘನತ್ಯಾಜ್ಯ, ಸ್ಮಶಾನ, ದಫನ ಭೂಮಿ, ನಿವೇಶನ ಇತ್ಯಾದಿ ಸಾರ್ವಜನಿಕ ಉದ್ದೇಶಗಳಿಗೆ ಗ್ರಾಮ ಪಂಚಾಯತ್ ಗಳು ಗುರುತಿಸಿ ಬೇಡಿಕೆ ಸಲ್ಲಿಸಿರುವ ಜಮೀನು ಕಾದಿರಿಸುವಿಕೆ ಕಡತಗಳು ಕಂದಾಯ ಇಲಾಖೆಯ ವಿವಿಧ ಹಂತಗಳಲ್ಲಿ ವಿಳಂಬವಾಗುತ್ತಿರುವುದರಿಂದ ಗ್ರಾಮಸ್ಥರ ಮೂಲಭೂತ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ತೊಂದರೆಯಾಗುತ್ತಿದೆ ಎಂದು  ಮನವಿಯಲ್ಲಿ ತಿಳಿಸಲಾಗಿದೆ.

ಒಕ್ಕೂಟದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಂದಾಯ ಸಚಿವ ಆರ್.ಅಶೋಕ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸ್ಪಂದಿಸಿದ ಸಚಿವರು ಈ  ವಿಷಯದ ಬಗ್ಗೆ ಪ್ರಥಮ ಆದ್ಯತೆ ನೀಡುವುದಲ್ಲದೆ ಸರಕಾರದ ಮಟ್ಟದಲ್ಲೂ ವಿಶೇಷ ಗಮನ ಹರಿಸುವುದಾಗಿ ಭರವಸೆ ನೀಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಒಕ್ಕೂಟದ ಸದಸ್ಯರಾದ ಪವಿತ್ರ ಪೂಂಜಾ ಮೊದಲಾದವರಿದ್ದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಡತ ಶೀಘ್ರ ವಿಲೇವಾರಿಗೆ ಗ್ರಾಪಂ ಪ್ರತಿನಿಧಿಗಳ ಒಕ್ಕೂಟ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*