ವಿಜಯ ಕರ್ನಾಟಕದಿಂದ ಪುತ್ತೂರಲ್ಲಿ ಅಡಕೆ ಬೆಳೆಗಾರರ ಜಿಲ್ಲಾ ಸಮಾವೇಶ

ಅಡಕೆ ಅಸ್ತಿತ್ವದ ಉಳಿವಿನ ಹೋರಾಟಕ್ಕೆ ವಿಜಯ ಕರ್ನಾಟಕ ವೇದಿಕೆ ಕಲ್ಪಿಸಿದೆ. ಅಕ್ಟೋಬರ್ 25ರಂದು ಶುಕ್ರವಾರ ಪೂರ್ವಾಹ್ನ 10.30ಕ್ಕೆ ಪುತ್ತೂರು ನಗರದ ಕಿಲ್ಲೆ ಮೈದಾನದ ಬಳಿಯಲ್ಲಿರುವ ನಗರಸಭೆಯ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಅಡಕೆ ಬೆಳೆಗಾರರ ಸಮಾವೇಶ ನಡೆಯಲಿದೆ.

ಬೆಳೆಗಾರರ ಸಮಸ್ಯೆ, ಸವಾಲುಗಳ ಚಿಂತನ ಮಂಥನ ಇಲ್ಲಿ ನಡೆಯುವುದು.  ಸಂಶೋಧಕರಾದ ಡಾ.ವಿಘ್ನೇಶ್ವರ ವರ್ಮುಡಿ ಮತ್ತು ಬದನಾಜೆ ಶಂಕರ ಭಟ್ ವಿಷಯ ಮಂಡನೆ ಮಾಡಲಿದ್ದಾರೆ. ಬೆಳೆಗಾರರ ಸಮಸ್ಯೆಗಳ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುತ್ತದೆ.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್. ಸತೀಶ್ಚಂದ್ರ, ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ದಿನೇಶ್ ಮೆದು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ಮಂಚಿ ಶ್ರೀನಿವಾಸಾಚಾರ್ ಮತ್ತಿತರರು  ಭಾಗವಹಿಸಲಿದ್ದಾರೆ. ನಾನಾ ರೈತ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಜಿಲ್ಲೆಯ ಬೆಳೆಗಾರರಿಗೆ ಸಂಬಂಧಿಸಿ ಈ ಕಾರ್ಯಕ್ರಮ ನಡೆಯಲಿದೆ.

ಅಡಕೆ ಮತ್ತು ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಅಡಕೆಯ ಸಾಂಪ್ರದಾಯಿಕ ಗೌರವ, ಪ್ರತಿಷ್ಠೆ ಮಣ್ಣು ಪಾಲಾಗಿದ್ದು, ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳಂಕವನ್ನು ಅಂಟಿಸಲಾಗಿದೆ. ಮತ್ತೊಂದೆಡೆ ಅಡಕೆ ನಿಷೇಧದ ತೂಗುಗತ್ತಿ ನೇತಾಡುತ್ತಿದೆ. ಧಾರಣೆ ಪಾತಾಳಕ್ಕಿಳಿಯುತ್ತಿದೆ. ಜೀವನ್ಮರಣದ ಹೋರಾಟ ಎದುರಿಗಿದೆ. ಇನ್ನೂ ಮೌನ ವಹಿಸಿದರೆ ಅಡಕೆಯ ಅಸ್ತಿತ್ವ ಅಳಿದು ಹೋಗುವ ಅಪಾಯವಿದೆ ಎಂಬ ನಿಟ್ಟಿನಲ್ಲಿ ಸಮಾವೇಶ ನಡೆಯಲಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಜಯ ಕರ್ನಾಟಕದಿಂದ ಪುತ್ತೂರಲ್ಲಿ ಅಡಕೆ ಬೆಳೆಗಾರರ ಜಿಲ್ಲಾ ಸಮಾವೇಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*