ಕಲ್ಲಡ್ಕ

ಯುವಮನಸ್ಸುಗಳನ್ನು ಒಗ್ಗೂಡಿಸುವ ಯುವವಾಹಿನಿ: ಮುದ್ದು ಮೂಡುಬೆಳ್ಳೆ

ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ ಯುವವಾಹಿನಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು.

ಜಾಹೀರಾತು

ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಉದ್ಘಾಟಿಸಿದರು. ಗೆಜ್ಜೆ ಗಿರಿ ನಂದನ ಬಿತ್ತಿಲ್ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ಮಾಣಿ ಘಟಕದ ಗತವರ್ಷದ ಒಟ್ಟು ಕಾರ್ಯಚಟುವಟಿಕೆಗಳ ನೆನಪಿನ ಸಂಚಿಕೆ ಮಾಣಿಕ್ಯವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ. ರಾಜಾರಾಮ್  ನೂತನ ಪದಾಧಿಕಾರಿಗಳ ಪದ ಪ್ರದಾನದ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಚುನಾವಣಾಧಿಕಾರಿ ಅಧಿಕಾರಿ ರಾಜೇಶ್ ಪೂಜಾರಿ ಬಾಬಣಕಟ್ಟೆ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಅಧ್ಯಕ್ಷರಾದ ನಾರಾಯಣ ಸಾಲ್ಯನ್, ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ಪುತ್ತೂರು ಉಪವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಲೋಕನಾಥ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ಯುವವಾಹಿನಿ(ರಿ.)ಮಾಣಿ ಘಟಕ ಶಾಶ್ವತ ವಿದ್ಯಾನಿಧಿ ಯೊಜನೆಯ ಮೂಲಕ ಘಟಕದ ಸಕ್ರಿಯ ಸದಸ್ಯೆ ಒಬ್ಬರಿಗೆ ಉನ್ನತ ಶಿಕ್ಷಣಕ್ಕಾಗಿ  25 ಸಾವಿರ ರೂ ಚೆಕ್ ನೀಡಲಾಯಿತು. ಸ್ಪಂದನ ಯೋಜನೆಯ ಮೂಲಕ 2 ಬಡ ಕುಟುಂಬಗಳಿಗೆ ಸಹಾಯಧನ ವಿತರಿಸಲಾಯಿತು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಅಭಿನಂದಿಸಲಾಯಿತು.ರಾಷ್ಟ್ರೀಯ ಯುವ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು,ಯುವವಾಹಿನಿ (ರಿ.)ಕೇಂದ್ರ ಸಮಿತಿಯ ನಿ.ಪೂ ಅಧ್ಯಕ್ಷರಾದ ಜಯಂತ್ ನಡುಬೈಲು,ಸಮಾಜ ಸೇವಕ ಸೊಮಪ್ಪ ಪೂಜಾರಿ ಮದೇಲು,ಉದ್ಯಮಿ ಮೋಹನ್ ಕುಮಾರ್, ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿ ಪ್ರಜ್ಞಾ,ಬಾಲ ಪ್ರತಿಭೆ ದಿಶಾ ಬರಿಮಾರು ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯಿಂದ ಪುರಸ್ಕೃತಗೊಂಡ ತ್ರಿವೇಣಿ ರಮೇಶ್ ಪೂಜಾರಿ, ಯುವವಾಹಿನಿ ಸಾಧಕ ಪ್ರಶಸ್ತಿ ಪಡೆದ ಘಟಕದ ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಅವರನ್ನು ಅಭಿನಂದಿಸಲಾಯಿತು.
ನಿಯೋಜಿತ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಲ ಮುಂದಿನ ವರ್ಷದ ಯುವವಾಹಿನಿ ಘಟಕದ ಕಾರ್ಯಚಟುವಟಿಕೆಗಳಿಗೆ ಎಲ್ಲರ ಸಹಕಾರವನ್ನು ಕೋರಿದರು. ಘಟಕದ ಕಾರ್ಯದರ್ಶಿ ಸುಜಿತ್ ಅಂಚನ್ ಗತವರ್ಷದ ವರದಿಯನ್ನು ಆಡಿಯೊ-ವಿಡಿಯೋ ವಿಧಾನದಲ್ಲಿ ಮಂಡಿಸಿದರು. ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶಿವರಾಜ್ ಪಿ.ಅರ್ ಧನ್ಯವಾದ ಸಮರ್ಪಿಸಿದರು.ಘಟಕದ ಸದಸ್ಯರಾದ ದಿನಕರ್ ಬರಿಮಾರು,ದೀಪಕ್ ಪೆರಾಜೆ,ತೃಪ್ತಿ ಮಿತ್ತೂರು ಮತ್ತು ರಾಜೇಶ್ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.ಸ್ವರ್ಣಜ್ಯೊತ್ಸ ಹಾಗೂ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ  ನಡೆಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts