ಬಂಟ್ವಾಳ

ಸಜಿಪನಡು ಗ್ರಾಮವನ್ನು ಉಳ್ಳಾಲಕ್ಕೆ ಸೇರಿಸಬೇಡಿ: ಸಚಿವರಿಗೆ ಮನವಿ

ಸಜಿಪನಡು ಗ್ರಾಮವನ್ನು ಉಳ್ಳಾಲ ತಾಲೂಕಿಗೆ ಸೇರ್ಪಡೆ ಮಾಡದಂತೆ ಹಾಗೂ ಸಜಿಪನಡು ಗ್ರಾಮವನ್ನು ಬಂಟ್ವಾಳ ತಾಲೂಕಿನಲ್ಲಿ ಉಳಿಸುವಂತೆ ಆಗ್ರಹಿಸಿ ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ನೇತೃತ್ವದ ನಿಯೋಗವು ದ.ಕ. ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂಗಳೂರು ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.

ಜಾಹೀರಾತು

ಉಳ್ಳಾಲ ತಾಲೂಕು ಸೇರ್ಪಡೆ ವಿರೋಧಿಸಿ ಕಂದಾಯ ಸಚಿವ ಆರ್. ಅಶೋಕ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಯು.ಟಿ.ಖಾದರ್, ಜಿಲ್ಲಾಧಿಕಾರಿ ಅವರಿಗೂ ಮನವಿ ಸಲ್ಲಿಸಲಾಗಿದೆ ಎಂದು ಸಜಿಪನಡು ಗ್ರಾಪಂ ಅಧ್ಯಕ್ಷ ನಾಸಿರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಮೊಕ್ತೇಸರ ಮುಳ್ಳಿಂಜ ವೆಂಕಟೇಶ್ವರ ಭಟ್, ಜೆರಿ ಮೊರಸ್, ಗ್ರಾಪಂ ಸದಸ್ಯರಾದ ಅಬ್ದುಲ್ ರಹಿಮಾನ್, ಸುರೇಶ್ ಬಂಗೇರ ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ